ದೇವರಿಗೆ ನೈವೇದ್ಯ ಅರ್ಪಿಸುವಾಗ ತುಳಸೀ ಎಲೆಯನ್ನು ಏಕೆ ಉಪಯೋಗಿಸುತ್ತಾರೆ?

೧. ತುಳಸಿಯ ವೈಶಿಷ್ಟ್ಯಗಳು: ತುಳಸಿಯ ಗಿಡವು ವಾಯುಮಂಡಲದಲ್ಲಿನ ಸಾತ್ತ್ವಿಕತೆಯನ್ನು ಸೆಳೆದುಕೊಳ್ಳುತ್ತದೆ ಮತ್ತು ಅದನ್ನು ಜೀವದ ಕಡೆಗೆ ಪ್ರಕ್ಷೇಪಿಸುತ್ತದೆ. ತುಳಸಿಯಲ್ಲಿ ಬ್ರಹ್ಮಾಂಡದಲ್ಲಿನ ಕೃಷ್ಣತತ್ತ್ವವನ್ನು ಸೆಳೆದುಕೊಳ್ಳುವ ಕ್ಷಮತೆಯೂ ಅಧಿಕವಾಗಿರುತ್ತದೆ.

೨. ಲಾಭಗಳು

ಅ. ತುಳಸಿಯ ಎಲೆಯಿಂದ ನೈವೇದ್ಯವನ್ನು ಅರ್ಪಿಸುವುದರಿಂದ ಸಾತ್ತ್ವಿಕ ಅನ್ನದಿಂದ ಪ್ರಕ್ಷೇಪಿತವಾಗುವ ಸೂಕ್ಷ್ಮಲಹರಿಗಳನ್ನು ತುಳಸಿಯ ಎಲೆಯು ಗ್ರಹಿಸಿಕೊಳ್ಳುತ್ತದೆ. ಹೀಗೆ ಸೂಕ್ಷ್ಮಲಹರಿಗಳಿಂದ ತುಂಬಿಕೊಂಡಿರುವ ಎಲೆಯನ್ನು ದೇವರಿಗೆ ಅರ್ಪಿಸುವುದರಿಂದ ದೇವತೆಯ ತತ್ತ್ವವು ಆ ಲಹರಿಗಳನ್ನು ಕೂಡಲೇ ಸೆಳೆದುಕೊಳ್ಳುತ್ತದೆ. ಈ ರೀತಿ ನಾವು ಅರ್ಪಿಸಿದ ಅನ್ನವು ತುಳಸಿ ಎಲೆಯ ಮಾಧ್ಯಮದಿಂದ ದೇವತೆಗೆ ಬೇಗನೇ ತಲುಪಿ ದೇವತೆಯು ಸಂತುಷ್ಟಳಾಗುತ್ತಾಳೆ.

ಆ. ತುಳಸಿಯ ಎಲೆಯನ್ನು ನೈವೇದ್ಯದ ಮೇಲಿಡುವುದರಿಂದ ಅನ್ನದ ಮೇಲೆ ಬಂದಿರುವ ರಜ-ತಮ ಕಣಗಳ ಆವರಣವು ಕಡಿಮೆಯಾಗುತ್ತದೆ. ತುಳಸಿ ಎಲೆಯಿಂದ ಪ್ರಕ್ಷೇಪಿತವಾಗುವ ಸಾತ್ತ್ವಿಕ ಲಹರಿಗಳಿಂದ ನೈವೇದ್ಯದ ಸುತ್ತಲಿನ ವಾಯುಮಂಡಲವು ಶುದ್ಧವಾಗಿ ನೈವೇದ್ಯದ ಮೇಲೆ ಕೆಟ್ಟ ಶಕ್ತಿಗಳ ಹಲ್ಲೆಯಾಗುವ ಸಾಧ್ಯತೆಯೂ ಕಡಿಮೆಯಾಗುತ್ತದೆ.

ಇ. ಭಾವಪೂರ್ಣವಾಗಿ ನೈವೇದ್ಯದ ಮೇಲೆ ತುಳಸಿ ಎಲೆಯನ್ನಿಡುವುದರಿಂದ ಅದು ಅದರ ಗುಣಧರ್ಮಕ್ಕನುಸಾರ ದೇವತೆಯಿಂದ ಬರುವ ಚೈತನ್ಯವನ್ನು ಗ್ರಹಿಸಿಕೊಂಡು ನೈವೇದ್ಯದಲ್ಲಿ ಹರಡುತ್ತದೆ. ಇಂತಹ ನೈವೇದ್ಯವನ್ನು ಸೇವಿಸುವುದರಿಂದ ಜೀವಕ್ಕೆ ಚೈತನ್ಯದ ಲಹರಿಗಳು ಸಿಗಲು ಸಹಾಯವಾಗುತ್ತದೆ.
- ಓರ್ವ ವಿದ್ವಾಂಸ (ಸೌ.ಅಂಜಲಿ ಗಾಡಗೀಳರ ಮಾಧ್ಯಮದಿಂದ, ೮.೫.೨೦೦೫, ಸಾಯಂ. ೬.೧೪ ಮತ್ತು ೧೨.೮.೨೦೦೪, ಮಧ್ಯಾಹ್ನ ೪.೨೯)

(ಹೆಚ್ಚಿನ ಮಾಹಿತಿಗಾಗಿ ಓದಿ: ಸನಾತನ ಸಂಸ್ಥೆಯ ಗ್ರಂಥ ‘ಪಂಚೋಪಚಾರ ಮತ್ತು ಷೋಡಶೋಪಚಾರ ಪೂಜೆಯ ಹಿಂದಿನ ಶಾಸ್ತ್ರ’)

ಸಂಬಂಧಿತ ಲೇಖನಗಳು
ಷೋಡಶೋಪಚಾರ ಪೂಜೆಯನ್ನು ಹೇಗೆ ಮಾಡಬೇಕು?
ನೈವೇದ್ಯವನ್ನು ಅರ್ಪಿಸುವಾಗ ತಟ್ಟೆಯ ಸುತ್ತಲೂ ನೀರಿನ ಮಂಡಲ ಏಕೆ ಹಾಕುತ್ತಾರೆ?
ದೇವರ ಪೂಜೆಯಾದ ನಂತರ ಮಾಡಬೇಕಾದ ಕೃತಿಗಳು ಮತ್ತು ಅದರ ಹಿಂದಿನ ಶಾಸ್ತ್ರ

3 comments:

  1. ದನ್ಯವಾದಗಳು ನಿಮ್ಮಗೆ. ನನಗೆ ಏಕದಾಶಿ ವ್ರತ ಮಾಡುವ ವಿದಾನವನ್ನು ದಯವಿಟ್ಟು ತಿಳಿಸಿಕೂಡಿ.

    ReplyDelete
  2. jai hindu, swami, nanage moola devaru yarendu? mattu devaralli yaru modalu mattu adu yake yendu dayavittu thilisi.nanu kelavu darmada pustaka odiddane ondondu pustakadalli ondondu ide addarinda adannu thiliyalu kastavaguthide. dayavittu thilisi.....OM SHANTHI

    ReplyDelete
    Replies
    1. ನಮಸ್ಕಾರ, ನಿಮ್ಮ ಪ್ರಶ್ನೆಗೆ ಸಂಕ್ಷಿಪ್ತವಾಗಿ ಉತ್ತರಿಸಲು ಕಷ್ಟವಾಗುತ್ತದೆ. ಆಯಾ ಸಂಪ್ರದಾಯದ ಎಲ್ಲ ಗ್ರಂಥಗಳಲ್ಲೂ ಅವರವರ ದೇವರೇ ಶ್ರೇಷ್ಠ ಅವರೇ ಮೂಲ ಎಂದು ಹೇಳುತ್ತಾರೆ. ಹಾಗಾಗಿ ನಿಮಗೆ ಗೊಂದಲವಾಗುವುದು ಸಹಜವೇ ಆಗಿದೆ. ನೀವು ಈಗಾಗಲೇ ಅನೇಕ ಪುಸ್ತಕ ಓದಿದರೂ ನಾನು ಇನ್ನೊಂದು ಪುಸ್ತಕವನ್ನು ಓದಲು ಹೇಳುತ್ತಿದ್ದೇನೆ. ಸಾಧ್ಯವಾದರೆ ಓದಿ. ನಮ್ಮ ಸಂಸ್ಥೆಯ ವತಿಯಿಂದ "ಪರಮೇಶ್ವರ, ಈಶ್ವರ" ಎಂಬ ಗ್ರಂಥ ಮುದ್ರಿಸಿದ್ದೇವೆ. ಅದರಲ್ಲಿ ವಿವರವಾಗಿ ನೀಡಲಾಗಿದೆ.

      Delete

Note: only a member of this blog may post a comment.