Showing posts with label ಹಬ್ಬ-ಉತ್ಸವ-ವ್ರತ. Show all posts
Showing posts with label ಹಬ್ಬ-ಉತ್ಸವ-ವ್ರತ. Show all posts

ಮಕರ ಸಂಕ್ರಾಂತಿ


ಅ. ತಿಥಿ : ಈ ಹಬ್ಬವು ತಿಥಿವಾಚಕವಾಗಿರದೇ ಅಯನ-ವಾಚಕವಾಗಿದೆ. ಈ ದಿನ ಸೂರ್ಯನ ನಿರಯನ ಮಕರ ರಾಶಿ ಯಲ್ಲಿ ಸಂಕ್ರಮಣವಾಗುತ್ತದೆ. ಸೂರ್ಯನ ಭ್ರಮಣದಿಂದಾಗುವ ಕಾಲ ವ್ಯತ್ಯಾಸವನ್ನು ಸರಿ ಪಡಿಸಲು ಪ್ರತಿ 80 ವರ್ಷಕ್ಕೊಮ್ಮೆ ಸಂಕ್ರಾಂತಿಯನ್ನು ಒಂದು ದಿನ ಮುಂದೂಡಲಾಗುತ್ತದೆ.

ಆ. ಇತಿಹಾಸ: ಸಂಕ್ರಾಂತಿಯನ್ನು ದೇವತೆ ಎಂದು ನಂಬಲಾಗಿದೆ. ಸಂಕ್ರಾಂತಿಯು ಸಂಕರಾಸುರನೆಂಬ ದೈತ್ಯನ ವಧೆ ಮಾಡಿದ್ದಾಳೆ ಎಂಬ ಕಥೆಯಿದೆ.

ಇ. ಸಂಕ್ರಾಂತಿಯ ಬಗ್ಗೆ ಪಂಚಾಂಗದಲ್ಲಿ ಇರುವ ಮಾಹಿತಿ: ಪಂಚಾಂಗದಲ್ಲಿ ಸಂಕ್ರಾಂತಿಯ ರೂಪ, ವಯಸ್ಸು, ವಸ್ತ್ರ, ಹೋಗುವ ದಿಕ್ಕು ಮುಂತಾದವುಗಳ ಮಾಹಿತಿ ಇರುತ್ತದೆ. ಅದು ಕಾಲಮಹಿಮೆಗನುಸಾರ ಅವಳಲ್ಲಿ ಆಗುವ ಬದಲಾವಣೆಯನ್ನು ಅನುಸರಿಸಿರುತ್ತದೆ.

ಈ. ಮಹತ್ವ: ಈ ದಿನ ಪಂಚಾಂಗದ ನಿರಯನ ಪದ್ಧತಿಗನುಸಾರ ಸೂರ್ಯನ ಉತ್ತರಾಯಣ ಪ್ರಾರಂಭವಾಗುತ್ತದೆ. ಕರ್ಕಸಂಕ್ರಾಂತಿಯಿಂದ ಮಕರ ಸಂಕ್ರಾಂತಿಯ ವರೆಗಿನ ಕಾಲವನ್ನು ‘ದಕ್ಷಿಣಾಯನ’ ಎನ್ನುತ್ತಾರೆ. ದಕ್ಷಿಣಾಯನ ಕಾಲದಲ್ಲಿ ಮೃತನಾದ ವ್ಯಕ್ತಿಯು, ಉತ್ತರಾಯಣದಲ್ಲಿ ಮೃತನಾದ ವ್ಯಕ್ತಿಗಿಂತ ದಕ್ಷಿಣಲೋಕಕ್ಕೆ (ಯಮಲೋಕಕ್ಕೆ) ಹೋಗುವ ಸಾಧ್ಯತೆ ಹೆಚ್ಚಿರುತ್ತದೆ.

ಮಹಾಶಿವರಾತ್ರಿ

ಮಹಾಶಿವರಾತ್ರಿಯ ದಿನ ಶಿವತತ್ತ್ವವು ಎಂದಿಗಿಂತ ೧೦೦೦ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ಶಿವತತ್ತ್ವದ ಲಾಭವು ಹೆಚ್ಚು ಪ್ರಮಾಣದಲ್ಲಿ ಸಿಗಲು ಮಹಾಶಿವರಾತ್ರಿಯ ದಿನ ಭಾವಪೂರ್ಣವಾಗಿ ಶಿವನ ಪೂಜೆ-ಅರ್ಚನೆಯನ್ನು ಮಾಡಬೇಕು; ಅದರೊಂದಿಗೆ ‘ಓಂ ನಮಃ ಶಿವಾಯ’ ನಾಮಜಪವನ್ನು ಆದಷ್ಟು ಹೆಚ್ಚು ಮಾಡಬೇಕು. ಈ ದಿನದಂದು ‘ಓಂ ನಮಃ ಶಿವಾಯ|’ ಈ ನಾಮಜಪವನ್ನು ಮಾಡುವ ಜೀವಕ್ಕೆ ಶಿವನ ಸೂಕ್ಷ್ಮ-ಶಕ್ತಿ ಸಿಗುತ್ತದೆ. ಶಿವನ ಜನ್ಮವು ಸ್ಥೂಲ ಮತ್ತು ಸೂಕ್ಷ್ಮ ರೂಪದ ಕೆಟ್ಟ ಶಕ್ತಿಗಳನ್ನು ನಾಶ ಮಾಡಲು ಮತ್ತು ಮಾನವನ ಕಲ್ಯಾಣಕ್ಕಾಗಿ ಆಗಿದೆ.

ಮಹಾಶಿವರಾತ್ರಿ ವ್ರತ ಏಕೆ ಮಾಡಬೇಕು?
ಶಿವನ ವಿಶ್ರಾಂತಿಯ ಕಾಲವೆಂದರೆ ಮಹಾಶಿವರಾತ್ರಿ. ಆ ಕಾಲದಲ್ಲಿ ಶಿವತತ್ತ್ವದ ಕಾರ್ಯ ನಿಂತುಹೋಗುತ್ತದೆ ಅಂದರೆ ಆ ಸಮಯದಲ್ಲಿ ಶಿವನು ಧ್ಯಾನಾವಸ್ಥೆಯಿಂದ ಸಮಾಧಿ ಅವಸ್ಥೆಗೆ ಹೋಗುತ್ತಾನೆ. ಶಿವನ ಸಮಾಧಿಸ್ಥಿತಿ ಅಂದರೆ ಶಿವನು ತನಗಾಗಿ ಸಾಧನೆ ಮಾಡುವ ಕಾಲ. ಆದುದರಿಂದ ಆ ಕಾಲದಲ್ಲಿ ವಿಶ್ವದಲ್ಲಿನ ತಮೋಗುಣ ಶಿವತತ್ತ್ವ ಸ್ವೀಕರಿಸುವುದಿಲ್ಲ. ಆದುದರಿಂದ ವಿಶ್ವದಲ್ಲಿ ತಮೋಗುಣ ಬಹಳ ಹೆಚ್ಚಾಗುತ್ತದೆ. ಅದರ ಪರಿಣಾಮ ನಮ್ಮ ಮೇಲಾಗಬಾರದೆಂದು ಮಹಾಶಿವರಾತ್ರಿಯ ವ್ರತವನ್ನು ಕೈಗೊಂಡು ಶಿವತತ್ತ್ವವನ್ನು ಆಕರ್ಷಿಸಬೇಕು.

ವ್ರತವನ್ನಾಚರಿಸುವ ಪದ್ಧತಿ
ಉಪವಾಸ, ಪೂಜೆ ಮತ್ತು ಜಾಗರಣೆ ಇವು ಈ ವ್ರತದ ಮೂರು ಅಂಗಗಳಾಗಿವೆ.

ವ್ರತದ ವಿಧಿ
ಮಾಘ ಕೃಷ್ಣ ಚತುರ್ದಶಿಯಂದು ಏಕಭುಕ್ತರಾಗಿರಬೇಕು (ಒಂದು ಹೊತ್ತು ಊಟ ಮಾಡುವುದು). ಚತುರ್ದಶಿಯಂದು ಬೆಳಗ್ಗೆ ವ್ರತದ ಸಂಕಲ್ಪವನ್ನು ಮಾಡಿ ಸಾಯಂಕಾಲ ನದಿಯಲ್ಲಿ ಅಥವಾ ಕೆರೆಯಲ್ಲಿ ಶಾಸ್ತ್ರೋಕ್ತವಾಗಿ ಸ್ನಾನ ಮಾಡಬೇಕು. ಭಸ್ಮ ಮತ್ತು ರುದ್ರಾಕ್ಷಿಗಳನ್ನು ಧರಿಸಬೇಕು. ಪ್ರದೋಷಕಾಲದಲ್ಲಿ ಶಿವನ ದೇವಸ್ಥಾನಕ್ಕೆ ಹೋಗಬೇಕು. ಶಿವನ ಧ್ಯಾನವನ್ನು ಮಾಡಬೇಕು, ಆಮೇಲೆ ಶೋಡಷೋಪಚಾರ ಪೂಜೆಯನ್ನು ಮಾಡಿ ಭವ ಭಾವಿನಿ ಪ್ರೀತ್ಯರ್ಥ ತರ್ಪಣವನ್ನು ನೀಡಬೇಕು. ಶಿವನಿಗೆ ೧೦೮ ಕಮಲಗಳನ್ನು ಅಥವಾ ಬಿಲ್ವಪತ್ರೆಗಳನ್ನು ನಾಮಮಂತ್ರ ಸಹಿತ ಅರ್ಪಿಸಬೇಕು. ಆಮೇಲೆ ಪುಷ್ಪಾಂಜಲಿಯನ್ನು ಅರ್ಪಿಸಿ ಅರ್ಘ್ಯ ನೀಡಬೇಕು. ಪೂಜೆ, ಸ್ತೋತ್ರಪಠಣ ಮತ್ತು ಮೂಲಮಂತ್ರ ಜಪದ ನಂತರ ಶಿವನ ಮಸ್ತಕದ ಮೇಲಿನ ಒಂದು ಹೂವನ್ನು ತಮ್ಮ ತಲೆಯ ಮೇಲಿಟ್ಟುಕೊಳ್ಳಬೇಕು ಮತ್ತು ಕ್ಷಮಾಯಾಚನೆ ಮಾಡಬೇಕು.

ಯಾಮಪೂಜೆ
ಶಿವರಾತ್ರಿಯಂದು ರಾತ್ರಿಯ ನಾಲ್ಕು ಪ್ರಹರಗಳಲ್ಲಿ ನಾಲ್ಕು ಪೂಜೆಗಳನ್ನು ಮಾಡಬೇಕೆಂಬ ವಿಧಾನವಿದೆ. ಅದಕ್ಕೆ ‘ಯಾಮಪೂಜೆ’ ಎನ್ನುತ್ತಾರೆ. ಪ್ರತಿಯೊಂದು ಯಾಮಪೂಜೆಯಲ್ಲಿ ದೇವರಿಗೆ ಅಭ್ಯಂಗಸ್ನಾನ ಮಾಡಿಸಬೇಕು, ಅನುಲೇಪನ ಮಾಡಿ ಧೋತ್ರಾ, ಮಾವಿನ ಹಾಗೂ ಬಿಲ್ವದ ಎಲೆಗಳನ್ನು ಅರ್ಪಿಸಬೇಕು. ಅಕ್ಕಿಯ ಹಿಟ್ಟಿನ ೨೬ ದೀಪಗಳನ್ನು ಮಾಡಿ ಅವುಗಳನ್ನು ದೇವರಿಗೆ ಬೆಳಗಬೇಕು. ಪೂಜೆಯ ನಂತರ ೧೦೮ ದೀಪಗಳನ್ನು ದಾನ ಮಾಡಬೇಕು. ಪ್ರತಿಯೊಂದು ಪೂಜೆಯ ಮಂತ್ರಗಳು ಬೇರೆಬೇರೆಯಾಗಿರುತ್ತವೆ, ಅವು ಗಳಿಂದ ಅರ್ಘ್ಯವನ್ನು ನೀಡಬೇಕು. ನೃತ್ಯ, ಗೀತೆ, ಕಥಾಶ್ರವಣ ಮುಂತಾದ ವಿಷಯಗಳಿಂದ ಜಾಗರಣೆಯನ್ನು ಮಾಡಬೇಕು. ಬೆಳಗ್ಗೆ ಸ್ನಾನ ಮಾಡಿ ಮತ್ತೊಮ್ಮೆ ಶಿವ ಪೂಜೆ ಮಾಡಬೇಕು. ಉಪವಾಸವನ್ನು ಬಿಡುವಾಗ ಬ್ರಾಹ್ಮಣಭೋಜನ ನೀಡಬೇಕು. ಆಶೀರ್ವಾದ ಪಡೆದುಕೊಂಡು ವ್ರತದ ಸಮಾಪ್ತಿ ಮಾಡಬೇಕು.

೧೨, ೧೪ ಅಥವಾ ೨೪ ವರ್ಷ ಈ ವ್ರತವನ್ನು ಆಚರಿಸಿದ ನಂತರ ಅದರ ಉದ್ಯಾಪನೆ (ವ್ರತದ ಪರಿಹಾರ) ಯನ್ನು ಮಾಡಬೇಕು.

ಇತರ ವಿಷಯಗಳು
ಶಿವಾಲಯದಲ್ಲಿ ಶಿವನ ದರ್ಶನ ಪಡೆಯುವ ಯೋಗ್ಯ ಪದ್ಧತಿ
ಶಿವನ ವಿಶ್ರಾಂತಿಯ ಕಾಲ ಎಂದರೇನು?
ಶಿವಲಿಂಗಕ್ಕೆ ಅರ್ಧಪ್ರದಕ್ಷಿಣೆಯನ್ನು ಏಕೆ ಹಾಕುತ್ತಾರೆ?

ಯುಗಾದಿಯಂದು ಏರಿಸುವ ಬ್ರಹ್ಮಧ್ವಜ

ಅ. ಬ್ರಹ್ಮಧ್ವಜದ ಇನ್ನೊಂದು ಹೆಸರು: ಬ್ರಹ್ಮದೇವನು ಯುಗಾದಿ ಪಾಡ್ಯದಂದು ಸೃಷ್ಟಿಯನ್ನು ನಿರ್ಮಿಸಿದ್ದ ರಿಂದ ಧರ್ಮಶಾಸ್ತ್ರದಲ್ಲಿ ಧ್ವಜಕ್ಕೆ ‘ಬ್ರಹ್ಮ ಧ್ವಜ’ ಎನ್ನುತ್ತಾರೆ. ಇದಕ್ಕೆ ಕೆಲವು ಜನರು ‘ಇಂದ್ರಧ್ವಜ’ ಎಂದೂ ಹೇಳುತ್ತಾರೆ.


ಆ. ಧ್ವಜವು ಯಾವುದರ ಪ್ರತೀಕವಾಗಿದೆ?: ಧ್ವಜವು ವಿಜಯದ ಮತ್ತು ಆನಂದದ ಪ್ರತೀಕವಾಗಿದೆ, ಆದುದರಿಂದ ಮನೆಮನೆಗಳಲ್ಲಿ ಬ್ರಹ್ಮಧ್ವಜವನ್ನು ನಿಲ್ಲಿಸುತ್ತಾರೆ. ವಿಜಯದ ಪ್ರತೀಕವು ಎತ್ತರವಾಗಿರುತ್ತದೆ; ಆದುದರಿಂದ ಬ್ರಹ್ಮಧ್ವಜವನ್ನು ಎತ್ತರವಾಗಿ ನಿಲ್ಲಿಸುತ್ತಾರೆ.

ಇ. ಪದ್ಧತಿ:
೧. ಸೂರ್ಯೋದಯದ ನಂತರ ಬ್ರಹ್ಮಧ್ವಜವನ್ನು ಕೂಡಲೇ ನಿಲ್ಲಿಸಬೇಕಾಗಿರುತ್ತದೆ. ಅಪವಾದಾತ್ಮಕ ಸ್ಥಿತಿಯಲ್ಲಿ (ಉದಾ.ತಿಥೀಕ್ಷಯ) ಪಂಚಾಂಗವನ್ನು ನೋಡಿ ಬ್ರಹ್ಮಧ್ವಜವನ್ನು ನಿಲ್ಲಿಸಬೇಕು.
೨. ಎತ್ತರವಾಗಿರುವ ಬಿದಿರಿನ ತುದಿಗೆ ಹಳದಿ ಬಣ್ಣದ ಜರತಾರಿಯ ಬಟ್ಟೆಯನ್ನು ಕಟ್ಟುತ್ತಾರೆ. ಅದರ ಮೇಲೆ ಸಕ್ಕರೆಯ ಗಂಟು, ಬೇವಿನ ಚಿಗುರೆಲೆ, ಮಾವಿನ ಟೊಂಗೆ ಮತ್ತು ಕೆಂಪು ಹೂವುಗಳ ಹಾರವನ್ನು ಕಟ್ಟಿ ಮೇಲೆ ಬೆಳ್ಳಿಯ ಅಥವಾ ತಾಮ್ರದ ಕಲಶದಿಂದ ಶೃಂಗರಿಸಿ ಧ್ವಜವನ್ನು ನಿಲ್ಲಿಸುತ್ತಾರೆ. ಧ್ವಜವನ್ನು ಮುಖ್ಯದ್ವಾರದ ಎದುರಿಗೆ, ಹೊಸ್ತಿಲಿನ ಹತ್ತಿರ, ಬಲಭಾಗದಲ್ಲಿ (ಮನೆಯ ಒಳಗಿನಿಂದ ನೋಡುವಾಗ) ಭೂಮಿಯ ಮೇಲೆ ನಿಲ್ಲಿಸಬೇಕು. ಧ್ವಜವನ್ನು ಅತೀ ನೇರವಾಗಿ ನಿಲ್ಲಿಸದೇ ಮುಂದಿನ ಬದಿಗೆ ಸ್ವಲ್ಪ ಬಾಗಿದ ಸ್ಥಿತಿಯಲ್ಲಿ ನಿಲ್ಲಿಸಬೇಕು. ಅದರ ಮುಂದೆ ಸುಂದರವಾದ ರಂಗೋಲಿಯನ್ನು ಬಿಡಿಸಬೇಕು.
೩. ಧ್ವಜಕ್ಕೆ ‘ಬ್ರಹ್ಮಧ್ವಜಾಯ ನಮಃ|’ ಎಂದು ಹೇಳಿ ಸಂಕಲ್ಪಪೂರ್ವಕ ಪೂಜೆಯನ್ನು ಮಾಡಬೇಕು.
೪. ಸೂರ್ಯಾಸ್ತದ ಸಮಯದಲ್ಲಿ ಬೆಲ್ಲದ ನೈವೇದ್ಯವನ್ನು ತೋರಿಸಿ ಧ್ವಜವನ್ನು ಕೆಳಗಿಳಿಸಬೇಕು.


(ಚಿತ್ರದಲ್ಲಿರುವ ಮಾಹಿತಿಯನ್ನು ಓದಲು ಚಿತ್ರಕ್ಕೆ ಕ್ಲಿಕ್ ಮಾಡಿ)

ಈ. ಲಾಭ: ಯುಗಾದಿಯ ದಿನ ಬ್ರಹ್ಮಾಂಡದಲ್ಲಿನ ಪ್ರಜಾಪತಿ ದೇವತೆಯ ಲಹರಿಗಳು ಪೃಥ್ವಿಯ ಮೇಲೆ ಎಲ್ಲಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಬರುತ್ತವೆ. ಬ್ರಹ್ಮಧ್ವಜದಿಂದಾಗಿ ವಾತಾವರಣದಲ್ಲಿನ ಪ್ರಜಾಪತಿ-ಲಹರಿಗಳು ಕಲಶದ ಸಹಾಯದಿಂದ ಮನೆಯೊಳಗೆ ಪ್ರವೇಶಿಸುತ್ತವೆ. (ಇದು ದೂರದರ್ಶನದ ಆಂಟೆನಾದಂತೆ ಕಾರ್ಯವನ್ನು ಮಾಡುತ್ತದೆ.) ಮರುದಿನದಿಂದ ಈ ಕಲಶವನ್ನು ನೀರು ಕುಡಿಯಲು ಉಪಯೋಗಿಸಬೇಕು; ಪ್ರಜಾಪತಿ-ಲಹರಿಗಳ ಸಂಸ್ಕಾರವಾಗಿರುವ ಕಲಶವು ಅದೇ ರೀತಿಯ ಸಂಸ್ಕಾರಗಳನ್ನು ಕುಡಿಯುವ ನೀರಿನ ಮೇಲೆ ಮಾಡುತ್ತದೆ, ಇದರಿಂದ ನಮಗೆ ವರ್ಷವಿಡೀ ಪ್ರಜಾಪತಿ-ಲಹರಿಗಳು ಪ್ರಾಪ್ತವಾಗುತ್ತವೆ.

(ಚಿತ್ರದಲ್ಲಿರುವ ಮಾಹಿತಿಯನ್ನು ಓದಲು ಚಿತ್ರಕ್ಕೆ ಕ್ಲಿಕ್ ಮಾಡಿ)

ಧ್ವಜದ ಪೂಜೆಯಲ್ಲಿ ಮತ್ತು ಧ್ವಜವನ್ನು ಇಳಿಸುವಾಗ ಮಾಡಬೇಕಾದ ಪ್ರಾರ್ಥನೆ
ಧ್ವಜದ ಪೂಜೆಯನ್ನು ಮಾಡುತ್ತಿರುವಾಗ ಮಾಡಬೇಕಾದ ಪ್ರಾರ್ಥನೆ: ‘ಹೇ ಬ್ರಹ್ಮದೇವ, ಹೇ ವಿಷ್ಣು, ಈ ಧ್ವಜದ ಮಾಧ್ಯಮದಿಂದ ವಾತಾವರಣದಲ್ಲಿ ವಿದ್ಯಮಾನವಾಗಿರುವ ಪ್ರಜಾಪತಿ, ಸೂರ್ಯ ಮತ್ತು ಸಾತ್ತ್ವಿಕ ಲಹರಿಗಳನ್ನು ನಾವು ಗ್ರಹಿಸುವಂತಾಗಲಿ. ಅದರಲ್ಲಿ ಸಿಗುವ ಶಕ್ತಿಯ ಚೈತನ್ಯವು ಸತತವಾಗಿರಲಿ. ನನಗೆ ಪ್ರಾಪ್ತವಾದ ಶಕ್ತಿಯು ಸಾಧನೆಗಾಗಿ ಉಪಯೋಗಿಸಲ್ಪಡಲಿ’ ಇದೇ ನಿಮ್ಮ ಚರಣಗಳಲ್ಲಿ ಪ್ರಾರ್ಥನೆ.

ಧ್ವಜವನ್ನು ಕೆಳಗೆ ಇಳಿಸುವಾಗ ಮಾಡಬೇಕಾದ ಪ್ರಾರ್ಥನೆ: ‘ಹೇ ಬ್ರಹ್ಮದೇವ, ಹೇ ವಿಷ್ಣು, ಇಂದು ದಿನವಿಡೀ ಈ ಧ್ವಜದಲ್ಲಿ ಸಂಗ್ರಹವಾದ ಶಕ್ತಿಯು ನನಗೆ ಸಿಗಲಿ. ಆ ಶಕ್ತಿಯು ರಾಷ್ಟ್ರ ಮತ್ತು ಧರ್ಮಕಾರ್ಯಕ್ಕೆ ಉಪಯೋಗವಾಗಲಿ’ ಇದೇ ನಿಮ್ಮ ಚರಣಗಳಲ್ಲಿ ಪ್ರಾರ್ಥನೆ. - ಶ್ರೀ ಗಣೇಶ (ಶ್ರೀ.ಭರತ ಮಿರಜೆಯವರ ಮಾಧ್ಯಮದಿಂದ, ೨೪.೨.೨೦೦೬, ಮಧ್ಯಾಹ್ನ ೩.೪೫)

(ಹೆಚ್ಚಿನ ಮಾಹಿತಿಗಾಗಿ ಓದಿ - ಸನಾತನ ಸಂಸ್ಥೆಯ ಗ್ರಂಥ 'ಹಬ್ಬ, ಧಾರ್ಮಿಕ ಉತ್ಸವ ಮತ್ತು ವ್ರತಗಳು')

ಹಿಂದೂಗಳ ಹೊಸ ವರ್ಷಾರಂಭ - ಯುಗಾದಿ


ಯಾವುದೇ ಕೃತಿಯನ್ನು ಮಾಡುವ ಮೊದಲು ಅದನ್ನು ಏಕೆ ಮಾಡಬೇಕು? ಅದರ ಹಿಂದಿನ ಶಾಸ್ತ್ರ, ಇತಿಹಾಸ ಏನು ಎಂದು ನಾವು ನೋಡುತ್ತೇವೆ. ಹಾಗಿದ್ದರೆ ಈಗ ಎಲ್ಲರೂ ಡಿಸೆಂಬರ್ ೩೧ ರಂದು ಯಾಕೆ ಹೊಸ ವರ್ಷ ಆಚರಿಸುತ್ತಾರೆ? ಇದರ ಹಿಂದಿನ ಶಾಸ್ತ್ರ ಅಥವಾ ಇತಿಹಾಸವೇನು ಎಂದು ನಿಮಗೆ ಅನಿಸಿಲ್ಲವೇ? ಸರಿಯಾದ ಕಾರಣಗಳಿಲ್ಲದಿದ್ದರೂ ನಾವು ಪಾಶ್ಚಾತ್ಯರ ಅಂಧಾನುಕರಣೆ ಮಾಡುತ್ತಾ ಡಿಸೆಂಬರ್ ೩೧ ರಂದು ಹೊಸವರ್ಷ ಎಂದು ಆಚರಿಸುತ್ತೇವೆ. ರಾತ್ರಿ ೧೨ ಗಂಟೆಗೆ ಡಿಸ್ಕೋ, ಪಬ್ಬುಗಳ ಕರ್ಕಶ ಸದ್ದು, ಕುಡಿದು ಕುಣಿಯುವ ಹುಡುಗರೊಂದಿಗೆ ಹೊಸವರ್ಷವನ್ನು ಆಚರಿಸುವುದು ನಿಮಗೆ ಸರಿ ಅನಿಸುತ್ತದೆಯೇ? ಅದನ್ನು ನೋಡಿ ನಿಜವಾಗಲೂ ಹೊಸವರ್ಷವೆಂದು ನಮಗೆ ಅನಿಸುತ್ತದೆಯೇ? ನೀವೇ ಇದರ ಕುರಿತು ವಿಚಾರ ಮಾಡಿ. ನಮ್ಮ ದಿನದ ಆರಂಭವು ಕತ್ತಲು, ದುಃಖದಿಂದ ಆಗಬೇಕೆಂದು ನಿಮಗೆ ಅನಿಸುತ್ತದೆಯೇ? ಹಿಂದೂ ಸಂಸ್ಕೃತಿಯನುಸಾರ ದಿನದ ಆರಂಭವು ಬೆಳಗ್ಗೆ ಸೂರ್ಯೋದಯದೊಂದಿಗೆ ಆಗುತ್ತದೆ.
ನಮ್ಮ ಹಿಂದೂ ಸಂಸ್ಕೃತಿಯನುಸಾರ ನಾವು ಯುಗಾದಿಯಂದು ಏಕೆ ಹೊಸವರ್ಷ ಆಚರಿಸುತ್ತೇವೆ ಎಂದು ನಿಮಗೆ ತಿಳಿದಿದೆಯೇ?

ಯುಗಾದಿ ಹಬ್ಬವನ್ನು ಆಚರಿಸುವುದರ ಮಹತ್ವ ಮತ್ತು ಕಾರಣಗಳು
ಎಲ್ಲ ವರ್ಷಾರಂಭಗಳಲ್ಲಿ ಅತ್ಯಂತ ಯೋಗ್ಯ ವರ್ಷಾರಂಭದ ದಿನವೆಂದರೆ ‘ಚೈತ್ರ ಶುಕ್ಲ ಪ್ರತಿಪದೆ. ’ಜನವರಿ ೧ ರಂದು ವರ್ಷಾರಂಭವನ್ನು ಏಕೆ ಮಾಡಬೇಕು ಎನ್ನುವುದಕ್ಕೆ ಯಾವುದೇ ಕಾರಣ ಇಲ್ಲ. ಯಾರೋ ಒಬ್ಬರು ನಿರ್ಧರಿಸಿದರು ಮತ್ತು ಅದು ಪ್ರಾರಂಭವಾಯಿತು. ತದ್ವಿರುದ್ಧ ಚೈತ್ರ ಶುಕ್ಲ ಪ್ರತಿಪದೆಯಂದು ವರ್ಷಾರಂಭವನ್ನು ಮಾಡಲು ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳಿವೆ.

ನೈಸಗಿಕ ಕಾರಣಗಳು: ಸರಿಸುಮಾರು ಪ್ರತಿಪದೆಯ ಸಮಯದಲ್ಲಿ ಸೂರ್ಯನು ವಸಂತ - ಸಂಪಾತದ ಮೇಲೆ ಬರುತ್ತಾನೆ (ಸಂಪಾತ ಬಿಂದು ಎಂದರೆ (ಮಕರ) ಕ್ರಾಂತಿವೃತ್ತ ಮತ್ತು ವಿಷುವವೃತ್ತ (ಕರ್ಕಾಟಕ) ಈ ಎರಡು ವೃತ್ತಗಳು ಯಾವ ಬಿಂದುವಿನಲ್ಲಿ ಪರಸ್ಪರ ಭೇದಿಸುತ್ತವೆಯೋ ಆ ಬಿಂದು) ಮತ್ತು ವಸಂತ ಋತುವು ಪ್ರಾರಂಭವಾಗುತ್ತದೆ. ಎಲ್ಲ ಋತುಗಳಲ್ಲಿ ‘ಕುಸುಮಾಕರಿ ವಸಂತ ಋತುವು ನನ್ನ ವಿಭೂತಿಯಾಗಿದೆ’ ಎಂದು ಭಗವಂತನು ಶ್ರೀಮದ್ಭಗವದ್ಗೀತೆಯಲ್ಲಿ (೧೦:೩೫) ಹೇಳಿದ್ದಾನೆ. ಈ ಸಮಯದಲ್ಲಿ ಸಮಶೀತೋಷ್ಣ, ಉತ್ಸಾಹವರ್ಧಕ ಮತ್ತು ಆಹ್ಲಾದಕರ ವಾತಾವರಣವಿರುತ್ತದೆ. ಶಿಶಿರ ಋತುವಿನಲ್ಲಿ ಗಿಡಮರಗಳ ಎಲೆಗಳು ಉದುರಿ ಹೋಗಿರುತ್ತವೆ ಮತ್ತು ಪ್ರತಿಪದೆಯ ಸಮಯದಲ್ಲಿ ಅವುಗಳಿಗೆ ಹೊಸ ಚಿಗುರು ಬರುತ್ತಿರುತ್ತವೆ. ಗಿಡಮರಗಳು ಚೆನ್ನಾಗಿ ಕಾಣುತ್ತವೆ. ಯುಗಾದಿ ಪಾಡ್ಯದಂದು ಪ್ರಾರಂಭವಾಗುವ ಹೊಸವರ್ಷದ ಕಾಲಚಕ್ರವು ವಿಶ್ವದ ಉತ್ಪತ್ತಿಯ ಕಾಲಚಕ್ರಕ್ಕೆ ಸಂಬಂಧಿಸಿದೆ. ಆದುದರಿಂದ ಸೃಷ್ಟಿಯು ನವಚೇತನದಿಂದ ತುಂಬಿರುತ್ತದೆ. ತದ್ವಿರುದ್ಧವಾಗಿ ಡಿಸೆಂಬರ್ ೩೧ ರಂದು ರಾತ್ರಿ ೧೨ ಗಂಟೆಗೆ ಪ್ರಾರಂಭವಾಗುವ ಹೊಸವರ್ಷದ ಕಾಲಚಕ್ರವು ವಿಶ್ವದ ಲಯಕಾಲಕ್ಕೆ ಸಂಬಂಧಿಸಿದೆ. ಯುಗಾದಿ ಪಾಡ್ಯದಂದು ಪ್ರಾರಂಭವಾಗುವ ಹೊಸವರ್ಷದ ತುಲನೆಯನ್ನು ಸೂರ್ಯೋದಯಕ್ಕೆ ಉದಯವಾಗುವ ತೇಜೋಮಯ ದಿನದೊಂದಿಗೆ ಮಾಡಬಹುದು.
ನಿಸರ್ಗದ ನಿಯಮವನ್ನು ಅನುಸರಿಸಿ ಮಾಡಿದ ವಿಷಯಗಳು ಮನುಷ್ಯರಿಗೆ ಪೂರಕವಾಗಿರುತ್ತವೆ ಮತ್ತು ಅದಕ್ಕೆ ವಿರುದ್ಧವಾಗಿ ಮಾಡಿರುವ ವಿಷಯಗಳು ಮನುಷ್ಯರಿಗೆ ಹಾನಿಕಾರಿಯಾಗಿರುತ್ತವೆ. ಆದುದರಿಂದ ಪಾಶ್ಚಾತ್ಯ ಸಂಸ್ಕೃತಿಗನುಸಾರ ಜನವರಿ ಒಂದರಂದು ಹೊಸವರ್ಷಾರಂಭವನ್ನು ಮಾಡದೇ, ಯುಗಾದಿ ಪಾಡ್ಯದಂದೇ ಹೊಸವರ್ಷವನ್ನು ಆಚರಿಸುವುದರಲ್ಲಿ ನಮ್ಮ ನಿಜವಾದ ಹಿತವಿದೆ.

ಐತಿಹಾಸಿಕ ಕಾರಣಗಳು: ಈ ದಿನದಂದು ರಾಮನು ವಾಲಿಯನ್ನು ವಧಿಸಿದನು. ವಿಜಯದ ಪ್ರತೀಕವು ಎತ್ತರದಲ್ಲಿರುತ್ತದೆ. ಹಾಗಾಗಿ ಬ್ರಹ್ಮಧ್ವಜ ಎತ್ತರದಲ್ಲಿರುತ್ತದೆ. ಈ ದಿನದಿಂದಲೇ ‘ಶಾಲಿವಾಹನ ಶಕೆ’ ಪ್ರಾರಂಭವಾಯಿತು, ಏಕೆಂದರೆ ಈ ದಿನ ಶಾಲಿವಾಹನನು ಶತ್ರುಗಳ ಮೇಲೆ ವಿಜಯವನ್ನು ಪಡೆದನು.

ಆಧ್ಯಾತ್ಮಿಕ ಕಾರಣಗಳು : ಬ್ರಹ್ಮದೇವನು ಇದೇ ದಿನದಿಂದು ಸೃಷ್ಟಿಯನ್ನು ನಿರ್ಮಿಸಿದನು. ಅರ್ಥಾತ್ ಈ ದಿನ ಸತ್ಯಯುಗವು ಪ್ರಾರಂಭವಾಯಿತು. ಆದುದರಿಂದಲೇ ಈ ದಿನದಂದು ವರ್ಷಾರಂಭವನ್ನು ಮಾಡುತ್ತಾರೆ. ಯುಗಾದಿಯಂದು ತೇಜ ಮತ್ತು ಪ್ರಜಾಪತಿ ಲಹರಿಗಳು ಹೆಚ್ಚಿನ ಪ್ರಮಾಣದಲ್ಲಿ ಕಾರ್ಯನಿರತವಾಗಿರುತ್ತವೆ. ಸೂರ್ಯೋದಯದ ಸಮಯದಲ್ಲಿ ಈ ಲಹರಿಗಳಿಂದ ಪ್ರಕ್ಷೇಪಿತವಾಗುವ ಚೈತನ್ಯವು ಹೆಚ್ಚಿನ ಸಮಯದವರೆಗೆ ಉಳಿಯುತ್ತದೆ. ಅದು ಜೀವದ ಜೀವಕೋಶಗಳಲ್ಲಿ ಸಂಗ್ರಹವಾಗುತ್ತದೆ ಹಾಗೂ ಅವಶ್ಯಕತೆಗನುಸಾರ ಆ ಜೀವದಿಂದ ಉಪಯೋಗಿಸಲ್ಪಡುತ್ತದೆ.

ಯುಗಾದಿ ಪಾಡ್ಯದಂದು ಮಾಡಬೇಕಾದ ಧಾರ್ಮಿಕ ಕೃತಿಗಳು
ಯಾವುದೇ ಹಬ್ಬ ಬಂದರೆ ಆ ಹಬ್ಬದ ವೈಶಿಷ್ಟ್ಯದಂತೆ ಮತ್ತು ನಮ್ಮ ಪದ್ಧತಿಯಂತೆ ನಾವು ಏನಾದರೂ ಮಾಡುತ್ತಿರುತ್ತೇವೆ, ಆದರೆ ಧರ್ಮದಲ್ಲಿ ಹೇಳಿದಂತಹ ಇಂತಹ ಪಾರಂಪರಿಕ ಕೃತಿಯ ಹಿಂದಿನ ಅಧ್ಯಾತ್ಮಶಾಸ್ತ್ರವನ್ನು ಗಮನದಲ್ಲಿಟ್ಟುಕೊಂಡರೆ ಅದರ ಮಹತ್ವವು ನಮಗೆ ಹಿಡಿಸುತ್ತದೆ. ಇಲ್ಲಿ ನಾವು ಯುಗಾದಿಯಂದು ಮಾಡಬೇಕಾದ ಧಾರ್ಮಿಕ ಕೃತಿಗಳ ಮಾಹಿತಿಯನ್ನು ಪಡೆಯೋಣ.

ಅಭ್ಯಂಗಸ್ನಾನ: ಯುಗಾದಿ ಪಾಡ್ಯದ ದಿನ ಬೆಳಗ್ಗೆ ಬೇಗನೆ ಎದ್ದು ಮೊದಲು ಅಭ್ಯಂಗಸ್ನಾನ ಮಾಡಬೇಕು. ಅಭ್ಯಂಗಸ್ನಾನವನ್ನು ಮಾಡುವಾಗ ‘ದೇಶಕಾಲಕಥನ’ ಮಾಡಬೇಕು.‘ ದೇಶಕಾಲಕಥನ’ ದಿಂದ ಅಹಂ ಕಡಿಮೆಯಾಗಲು ಸಹಾಯವಾಗುತ್ತದೆ.

ತೋರಣವನ್ನು ಕಟ್ಟುವುದು: ಸ್ನಾನದ ಬಳಿಕ ಮಾವಿನ ಎಲೆಯ ತೋರಣವನ್ನು ತಯಾರಿಸಿ ಕೆಂಪು ಹೂವುಗಳೊಂದಿಗೆ ಎಲ್ಲ ಬಾಗಿಲುಗಳಿಗೆ ಕಟ್ಟಬೇಕು. ಏಕೆಂದರೆ ಕೆಂಪು ಬಣ್ಣ ಶುಭಸೂಚಕವಾಗಿದೆ. ಸಾತ್ತ್ವಿಕ ತೋರಣದಿಂದ ಚೈತನ್ಯ ಪ್ರಕ್ಷೇಪಿತವಾಗಿ ಸಂರಕ್ಷಣಾಕವಚ ನಿರ್ಮಾಣವಾಗುತ್ತದೆ.

ಪೂಜೆ: ಮೊದಲು ನಿತ್ಯಕರ್ಮ ದೇವರ ಪೂಜೆಯನ್ನು ಮಾಡಬೇಕು. ‘ವರ್ಷದ ಪಾಡ್ಯದಂದು ಮಹಾಶಾಂತಿ ಮಾಡಬೇಕು. ಶಾಂತಿಯ ಪ್ರಾರಂಭದಲ್ಲಿ ಬ್ರಹ್ಮದೇವನ ಪೂಜೆಯನ್ನು ಮಾಡಬೇಕು, ಏಕೆಂದರೆ ಬ್ರಹ್ಮದೇವನು ವಿಶ್ವವನ್ನು ಈ ದಿನವೇ ನಿರ್ಮಿಸಿದನು. ಪೂಜೆಯಲ್ಲಿ ಅವನಿಗೆ ದವನವನ್ನು (ಸುವಾಸನೆಯ ಎಲೆಗಳನ್ನು) ಅರ್ಪಿಸಬೇಕು. ಅನಂತರ ಹೋಮಹವನ ಮತ್ತು ಬ್ರಾಹ್ಮಣಸಂತರ್ಪಣೆ ಮಾಡಬೇಕು. ತರುವಾಯ ಅನಂತ ರೂಪಗಳಲ್ಲಿ ಅವತರಿಸುವ ಶ್ರೀವಿಷ್ಣುವಿನ ಪೂಜೆಯನ್ನು ಮಾಡಬೇಕು. ‘ನಮಸ್ತೆ ಬಹುರೂಪಾಯ ವಿಷ್ಣವೇ ನಮಃ|’ ಎನ್ನುವ ಮಂತ್ರವನ್ನು ಹೇಳಿ ಅವನಿಗೆ ನಮಸ್ಕರಿಸಬೇಕು. ಅನಂತರ ಬ್ರಾಹ್ಮಣರಿಗೆ ದಕ್ಷಿಣೆಯನ್ನು ನೀಡಬೇಕು, ಸಾಧ್ಯವಾದರೆ ಇತಿಹಾಸ, ಪುರಾಣ ಮುಂತಾದ ಗ್ರಂಥಗಳನ್ನು ಬ್ರಾಹ್ಮಣರಿಗೆ ದಾನವೆಂದು ನೀಡಬೇಕು. ಈ ಶಾಂತಿಯನ್ನು ಮಾಡುವುದರಿಂದ ಎಲ್ಲ ಪಾಪಗಳು ನಾಶವಾಗುತ್ತವೆ, ಸಂಕಟಗಳು ಬರುವುದಿಲ್ಲ,ಆಯುಷ್ಯವೃದ್ಧಿಯಾಗುತ್ತದೆ ಮತ್ತು ಧನಧಾನ್ಯಗಳ ಸಮೃದ್ಧಿಯಾಗುತ್ತದೆ.’ ಈ ದಿನ ಯಾವ ವಾರವಿರುತ್ತದೆಯೋ, ಆ ವಾರದೇವತೆಯ ಪೂಜೆಯನ್ನೂ ಮಾಡಬೇಕು.

ಬ್ರಹ್ಮಧ್ವಜವನ್ನು ಏರಿಸುವುದು: ದೊಡ್ಡ ಕೋಲಿನ ತುದಿಗೆ ಹಸಿರು ಅಥವಾ ಹಳದಿ ಬಣ್ಣದ ಜರಿಯ ಖಣವನ್ನು ಕಟ್ಟುತ್ತಾರೆ. ಅದರ ಮೇಲೆ ಸಕ್ಕರೆಯ ಗಂಟು, ಬೇವಿನ ಚಿಗುರೆಲೆ, ಮಾವಿನ ಎಲೆ ಮತ್ತು ಕೆಂಪು ಹೂವುಗಳ ಹಾರವನ್ನು ಕಟ್ಟಿ ಮೇಲೆ ಬೆಳ್ಳಿಯ ಅಥವಾ ತಾಮ್ರದ ಕಲಶದಿಂದ ಶೃಂಗರಿಸಿ ಧ್ವಜವನ್ನು ನಿಲ್ಲಿಸುತ್ತಾರೆ. ಅದರ ಮುಂದೆ ಸುಂದರವಾದ ರಂಗೋಲಿ ಹಾಕುತ್ತಾರೆ. ಇದಕ್ಕೆ ‘ಬ್ರಹ್ಮಧ್ವಜಾಯ ನಮಃ|’ ಎಂದು ಹೇಳಿ ಸಂಕಲ್ಪಪೂರ್ವಕವಾಗಿ ಪೂಜೆ ಮಾಡಬೇಕು. ಎರಡನೆಯ ದಿನದಿಂದ ಈ ಕಲಶವನ್ನು ನೀರು ಕುಡಿಯಲು ಉಪಯೋಗಿಸಬೇಕು, ಸೂರ್ಯಾಸ್ತದ ಸಮಯದಲ್ಲಿ ಬೆಲ್ಲದ ನೈವೇದ್ಯವನ್ನು ತೋರಿಸಿ ಧ್ವಜವನ್ನು ಕೆಳಗಿಳಿಸುತ್ತಾರೆ.


ಧರ್ಮಧ್ವಜವನ್ನು ನಿಲ್ಲಿಸುವ ಪದ್ಧತಿ
೧. ಧರ್ಮಧ್ವಜದ ಸ್ಥಾನ : ಧರ್ಮಧ್ವಜವನ್ನು ಬಾಗಿಲ ಹೊರಗೆ; ಅದರೆ ಹೊಸ್ತಿಲಿನ ಹತ್ತಿರ (ಮನೆಯೊಳಗಿಂದ ನೋಡಿದರೆ) ಬಲಗಡೆಯಲ್ಲಿ ನಿಲ್ಲಿಸಬೇಕು.
೨. ಪದ್ಧತಿ :
ಅ. ಧರ್ಮಧ್ವಜವನ್ನು ನಿಲ್ಲಿಸುವಾಗ ಎಲ್ಲಕ್ಕಿಂತ ಮೊದಲು ಸೆಗಣಿಯಿಂದ ನೆಲಸಾರಿಸಿ ಅಂಗಳವನ್ನು ರಂಗೋಲಿಯಿಂದ ಸುಶೋಭಿತಗೊಳಿಸಬೇಕು. ಧರ್ಮಧ್ವಜವನ್ನು ನಿಲ್ಲಿಸುವ ಜಾಗದಲ್ಲಿ ರಂಗೋಲಿಯಿಂದ ಸ್ವಸ್ತಿಕವನ್ನು ಬಿಡಿಸಿ ಅದರ ಮಧ್ಯಬಿಂದುವಿನಲ್ಲಿ ಅರಿಷಿಣ ಕುಂಕುಮವನ್ನು ಹಾಕಬೇಕು.
ಆ. ಧರ್ಮಧ್ವಜವನ್ನು ನಿಲ್ಲಿಸುವಾಗ ಬ್ರಹ್ಮಾಂಡದಲ್ಲಿನ ಶಿವ ಶಕ್ತಿಯ ಲಹರಿಗಳ ಆವಾಹನ ಮಾಡಿ ಅವುಗಳನ್ನು ಸ್ವಸ್ತಿಕದ ಮೇಲೆ ಸ್ಥಾಪಿಸಬೇಕು. ಇದರಿಂದ ಧರ್ಮಧ್ವಜದ ತುದಿಯಲ್ಲಿ ಇರುವ ಎಲ್ಲ ಘಟಕಗಳಿಗೆ ದೇವತ್ವವು ಪ್ರಾಪ್ತವಾಗುತ್ತದೆ.
ಇ. ಧರ್ಮಧ್ವಜವನ್ನು ನೆಲದ ಮೇಲೆ ಹೊಸ್ತಿಲಿನ ಹತ್ತಿರ; ಆದರೆ ಸ್ವಲ್ಪ ಬಾಗಿದ ಸ್ಥಿತಿಯಲ್ಲಿ ನಿಲ್ಲಿಸಬೇಕು.

ಯುಗಾದಿಯಂದು ಏರಿಸುವ ಬ್ರಹ್ಮಧ್ವಜದ ಬಗ್ಗೆ ವಿವರವಾಗಿ ಓದಲು ಇಲ್ಲಿ ಕ್ಲಿಕ್ ಮಾಡಿ.

ಪಂಚಾಂಗ ಶ್ರವಣ ಎಂದರೇನು ಮತ್ತು ಅದರ ಮಹತ್ವ ಏನು?
ಜ್ಯೋತಿಷಿಯ ಪೂಜೆಯನ್ನು ಮಾಡಿ ಅವರಿಂದ ಅಥವಾ ಉಪಾಧ್ಯಾಯರಿಂದ ಹೊಸ ವರ್ಷದ ಪಂಚಾಂಗವನ್ನು ಅರ್ಥಾತ್ ವರ್ಷಫಲದ ಶ್ರವಣವನ್ನು ಮಾಡಬೇಕು. ಈ ವರ್ಷಫಲದ ಶ್ರವಣದ ಫಲ ಹೇಳಲಾಗಿದೆ, ಅದು ಮುಂದಿನಂತಿದೆ. ತಿಥಿಯ ಶ್ರವಣದಿಂದ ಲಕ್ಷ್ಮೀಯು ಲಭಿಸುತ್ತಾಳೆ, ವಾರದ ಶ್ರವಣದಿಂದ ಆಯುಷ್ಯವು ವೃದ್ಧಿಯಾಗುತ್ತದೆ, ನಕ್ಷತ್ರಶ್ರವಣದಿಂದ ಪಾಪನಾಶ ವಾಗುತ್ತದೆ, ಯೋಗಶ್ರವಣದಿಂದ ರೋಗಗಳ ನಿವಾರಣೆಯಾಗುತ್ತದೆ, ಕರಣ ಶ್ರವಣದಿಂದ ಇಚ್ಛಿತ ಕಾರ್ಯವು ಸಾಧ್ಯವಾಗುತ್ತದೆ. ಇವು ಪಂಚಾಂಗ ಶ್ರವಣದ ಉತ್ತಮ ಫಲಗಳಾಗಿವೆ. ಇದರ ನಿತ್ಯಶ್ರವಣದಿಂದ ಗಂಗಾಸ್ನಾನದ ಫಲವು ಲಭಿಸುತ್ತದೆ.’

ಬೇವಿನ ಪ್ರಸಾದ: ಪಂಚಾಂಗಶ್ರವಣದ ನಂತರ ಕಹಿ ಬೇವಿನ ಪ್ರಸಾದ ಹಂಚಬೇಕು. ಈ ಪ್ರಸಾದವನ್ನು ಬೇವಿನ ಹೂವು,ಚಿಗುರೆಲೆಗಳು, ನೆನೆಸಿದ ಕಡಲೆಕಾಳು ಅಥವಾ ಬೇಳೆ, ಜೇನು, ಜೀರಿಗೆ ಮತ್ತು ಸ್ವಲ್ಪ ಇಂಗು ಇವೆಲ್ಲವನ್ನು ಬೆರೆಸಿ ತಯಾರಿಸುತ್ತಾರೆ.

ಭೂಮಿಯನ್ನು ಊಳುವುದು: ಯುಗಾದಿಯಂದು ಭೂಮಿಯನ್ನು ಊಳಬೇಕು. ಭೂಮಿಯನ್ನು ಊಳುವಾಗ ಕೆಳಗಿನ ಮಣ್ಣು ಮೇಲೆ ಬರುತ್ತದೆ. ಮಣ್ಣಿನ ಸೂಕ್ಷ್ಮ-ಕಣಗಳ ಮೇಲೆ ಪ್ರಜಾಪತಿ ಲಹರಿಗಳ ಸಂಸ್ಕಾರವಾಗಿ ಬೀಜ ಮೊಳಕೆಯೊಡೆಯುವ ಭೂಮಿಯ ಸಾಮರ್ಥ್ಯವು ಅನೇಕ ಪಟ್ಟು ಹೆಚ್ಚಾಗುತ್ತದೆ. ಭೂಮಿಗೆ ಉಪಯೋಗಿಸಲ್ಪಡುವ ಸಲಕರಣೆ ಮತ್ತು ಎತ್ತುಗಳ ಮೇಲೆ ಪ್ರಜಾಪತಿ ಲಹರಿಗಳನ್ನು ಉತ್ಪನ್ನ ಮಾಡುವ ಮಂತ್ರಸಹಿತ ಅಕ್ಷತೆಗಳನ್ನು ಹಾಕಬೇಕು. ಹೊಲದಲ್ಲಿ (ಗದ್ದೆಯಲ್ಲಿ) ಕೆಲಸ ಮಾಡುವವರಿಗೆ ಹೊಸ ಬಟ್ಟೆಗಳನ್ನು ಕೊಡಬೇಕು. ಈ ದಿನ ಹೊಲದಲ್ಲಿ ಕೆಲಸ ಮಾಡುವ ಜನರ ಮತ್ತು ಎತ್ತುಗಳ ಭೋಜನದಲ್ಲಿ ಕುಂಬಳಕಾಯಿ, ಹೆಸರುಬೇಳೆ, ಅಕ್ಕಿ, ಹೂರಣ ಮುಂತಾದ ಪದಾರ್ಥಗಳಿರಬೇಕು.

ದಾನ : ಯಾಚಕರಿಗೆ ಅನೇಕ ವಿಧದ ದಾನವನ್ನು ಕೊಡಬೇಕು, ಉದಾ. ಅರವಟ್ಟಿಗೆಯನ್ನು (ಜಲ ಮಂದಿರ) ನಿರ್ಮಿಸಿ ನೀರಿನ ದಾನವನ್ನು ಮಾಡಬೇಕು. ಇದರಿಂದ ಪಿತೃಗಳು ಸಂತುಷ್ಟರಾಗುತ್ತಾರೆ.

ಈ ದಿನ ಅನೇಕ ವಿಧದ ಮಂಗಲ ಹಾಡುಗಳನ್ನು ಮತ್ತು ಪುಣ್ಯಪುರುಷರ ಕಥೆಗಳನ್ನು ಕೇಳುತ್ತಾ ಈ ದಿನವನ್ನು ಆನಂದದಿಂದ ಕಳೆಯಬೇಕು. ಈಗಿನ ಕಾಲದ ಹಬ್ಬವೆಂದರೆ ಮೋಜು ಮಜಾ ಮಾಡುವ ದಿನವೆಂಬ ಸಂಕಲ್ಪನೆ ಬರುವಂತಾಗಿದೆ, ಆದರೆ ಹಿಂದೂ ಧರ್ಮದ ಶಾಸ್ತ್ರೀಯ ಪದ್ಧತಿಯ ಹಬ್ಬವೆಂದರೆ ‘ಹೆಚ್ಚೆಚ್ಚು ಚೈತನ್ಯ ಪಡೆಯುವ ದಿನ’ವಾಗಿರುತ್ತದೆ. ಆದ್ದರಿಂದ ಹಬ್ಬದಂದು ಸಾತ್ತ್ವಿಕ ಆಹಾರ, ಸಾತ್ತ್ವಿಕ ಬಟ್ಟೆ ಹಾಗೂ ಇತರ ಧಾರ್ಮಿಕ ಕೃತಿ ಇತ್ಯಾದಿಗಳನ್ನು ಮಾಡುವುದರೊಂದಿಗೆ ಸಾತ್ತ್ವಿಕವಾದ ಸುಖದಾಯಕ ಕೃತಿಗಳನ್ನು ಮಾಡಲು ಶಾಸ್ತ್ರವು ಹೇಳಿದೆ. ಈ ರೀತಿ ಯುಗಾದಿಯನ್ನು ಆಚರಿಸುವುದರಿಂದ ಆರೋಗ್ಯ, ಕೃಷಿ ಮುಂತಾದವು ಹೆಚ್ಚಾಗುತ್ತದೆ.

(ಹೆಚ್ಚಿನ ಮಾಹಿತಿಗಾಗಿ ಓದಿ - ಸನಾತನ ಸಂಸ್ಥೆಯ ಗ್ರಂಥ 'ಹಬ್ಬ, ಧಾರ್ಮಿಕ ಉತ್ಸವ ಮತ್ತು ವ್ರತಗಳು')

ಗಣೇಶ ಜಯಂತಿ


ಇತಿಹಾಸ: ಯಾವ ದಿನ ಗಣೇಶ ಲಹರಿಗಳು ಪ್ರಥಮ ಬಾರಿ ಪೃಥ್ವಿಯ ಮೇಲೆ ಬಂದವೋ, ಅಂದರೆ ಯಾವ ದಿನ ಗಣೇಶನ ಜನ್ಮವಾಯಿತೋ, ಆ ದಿನವು ಮಾಘ ಶುಕ್ಲ ಚತುರ್ಥಿಯಾಗಿತ್ತು. ಅಂದಿನಿಂದ ಗಣಪತಿ ಮತ್ತು ಚತುರ್ಥಿಯ ಸಂಬಂಧವನ್ನು ಜೋಡಿಸಲಾಯಿತು.

ಗಣೇಶ ಜಯಂತಿ: ಮಾಘ ಶುಕ್ಲ ಚತುರ್ಥಿಯನ್ನು ‘ಗಣೇಶ ಜಯಂತಿ’ ಎಂದು ಆಚರಿಸುತ್ತಾರೆ. ಈ ತಿಥಿಯ ವೈಶಿಷ್ಟ್ಯವೆಂದರೆ, ಈ ತಿಥಿಗೆ ಶ್ರೀ ಗಣೇಶನ ತತ್ತ್ವವು ಇತರ ದಿನಗಳ ತುಲನೆಯಲ್ಲಿ ೧ ಸಾವಿರ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ.

ಮಹತ್ವ
ಗಣಪತಿಯ ಸ್ಪಂದನಗಳು ಮತ್ತು ಪೃಥ್ವಿಯ ಚತುರ್ಥಿ ತಿಥಿಯ ಸ್ಪಂದನಗಳು ಒಂದೇ ರೀತಿಯದ್ದಾಗಿರುತ್ತವೆ, ಆದುದರಿಂದ ಅವುಗಳು ಒಂದಕ್ಕೊಂದು ಅನುಕೂಲವಾಗಿರುತ್ತವೆ; ಅಂದರೆ ಆ ದಿನ ಗಣಪತಿಯ ಸ್ಪಂದನಗಳು ಹೆಚ್ಚಿನ ಪ್ರಮಾಣದಲ್ಲಿ ಪೃಥ್ವಿಯ ಮೇಲೆ ಬರಬಹುದು. ಪ್ರತಿ ತಿಂಗಳ ಚತುರ್ಥಿಯ ದಿನ ಗಣಪತಿಯ ತತ್ತ್ವವು ಇತರ ದಿನಗಳ ತುಲನೆಯಲ್ಲಿ ಪೃಥ್ವಿಯ ಮೇಲೆ ೧೦೦ ಪಟ್ಟು ಹೆಚ್ಚಿಗೆ ಕಾರ್ಯನಿರತವಾಗಿರುತ್ತದೆ. ಈ ತಿಥಿಗೆ ಶ್ರೀ ಗಣೇಶನ ಉಪಾಸನೆಯನ್ನು ಮಾಡಿದರೆ ಗಣೇಶತತ್ತ್ವದ ಲಾಭವು ಹೆಚ್ಚಿಗೆ ಆಗುತ್ತದೆ.

ಶ್ರೀ ಗಣೇಶ ಚತುರ್ಥಿ

ಮಹತ್ವ: ಆಷಾಢ ಹುಣ್ಣಿಮೆಯಿಂದ ಕಾರ್ತಿಕ ಹುರ್ಣಿಮೆಯವರೆಗಿನ ೧೨೦ ದಿನಗಳ ಕಾಲದಲ್ಲಿ ವಿನಾಶಕಾರಿ, ತಮಪ್ರಧಾನ ಯಮಲಹರಿಗಳು ಹೆಚ್ಚು ಪ್ರಮಾಣದಲ್ಲಿ ಪೃಥ್ವಿಯ ಮೇಲೆ ಬರುತ್ತವೆ. ಈ ಕಾಲದಲ್ಲಿ ಅವುಗಳ ತೀವ್ರತೆಯೂ ಹೆಚ್ಚಿಗೆ ಇರುತ್ತದೆ. ಈ ತೀವ್ರತೆಯ ಕಾಲದಲ್ಲಿ, ಅಂದರೆ ಭಾದ್ರಪದ ಶುಕ್ಲ ಚತುರ್ಥಿಯಿಂದ ಅನಂತ ಚತುರ್ದಶಿಯ ವರೆಗೆ ಗಣೇಶ ಲಹರಿಗಳು ಪೃಥ್ವಿಯ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ಬರುವುದರಿಂದ ಯಮಲಹರಿಗಳ ತೀವ್ರತೆ ಕಡಿಮೆಯಾಗಲು ಸಹಾಯವಾಗುತ್ತದೆ. (ಈ ಲಹರಿಗಳ ಬಗ್ಗೆ ಹೆಚ್ಚಿನ ಜ್ಞಾನವನ್ನು ಸನಾತನದ ‘ಹಬ್ಬ, ಧಾರ್ಮಿಕ ಉತ್ಸವ ಮತ್ತು ವ್ರತಗಳು’ ಈ ಗ್ರಂಥದಲ್ಲಿ ಕೊಡಲಾಗಿದೆ.)

ಶ್ರೀ ಗಣೇಶ ಚತುರ್ಥಿಯ ದಿನ ಹಾಗೆಯೇ ಗಣೇಶೋತ್ಸವದ ದಿನಗಳಲ್ಲಿ ಗಣೇಶತತ್ತ್ವವು ದಿನನಿತ್ಯದ ತುಲನೆಯಲ್ಲಿ ಪೃಥ್ವಿಯ ಮೇಲೆ ಒಂದು ಸಾವಿರ ಪಟ್ಟು ಹೆಚ್ಚು ಕಾರ್ಯನಿರತ ವಾಗಿರುತ್ತದೆ. ಈ ಸಮಯದಲ್ಲಿ ಮಾಡಿದ ಗಣೇಶನ ಉಪಾಸನೆಯಿಂದ ಗಣೇಶತತ್ತ್ವದ ಹೆಚ್ಚು ಲಾಭವಾಗುತ್ತದೆ.

ಗಣೇಶನಿಗೆ ಸಂಬಂಧಿಸಿದ ಹಬ್ಬಗಳಂದು ಬಿಡಿಸಬೇಕಾದ ರಂಗೋಲಿ


(ಹೆಚ್ಚಿನ ಮಾಹಿತಿಗೆ ಓದಿ : ಸನಾತನ ಸಂಸ್ಥೆಯ ಗ್ರಂಥ 'ಶ್ರೀ ಗಣಪತಿ')

ಶ್ರೀ ಗಣೇಶನ ಕುರಿತು ಲಭ್ಯವಿರುವ ಸನಾತನ ಸಂಸ್ಥೆಯ ಇತರ ಗ್ರಂಥಗಳು
೧. ಶ್ರೀ ಗಣಪತಿ ಅಥರ್ವಶೀರ್ಷ ಮತ್ತು ಸಂಕಷ್ಟನಾಶನಸ್ತೋತ್ರ (ಅರ್ಥಸಹಿತ)
೨. ಶ್ರೀ ಗಣೇಶಮೂರ್ತಿ ಶಾಸ್ತ್ರಾನುಸಾರ ಇರಬೇಕು!
೩. ಶ್ರೀ ಗಣಪತಿ (ಕಿರುಗ್ರಂಥ)
೪. ಶ್ರೀ ಗಣೇಶ ಪೂಜಾವಿಧಿ (ಕೆಲವು ಮಂತ್ರಗಳ ಅರ್ಥಸಹಿತ)

ಸಂಬಂಧಿತ ವಿಷಯಗಳು
Dharma Granth

ಋಷಿಪಂಚಮಿ


೧. ತಿಥಿ : ಭಾದ್ರಪದ ಶುಕ್ಲ ಪಕ್ಷ ಪಂಚಮಿ
೨. ಋಷಿ : ಕಶ್ಯಪ, ಅತ್ರಿ, ಭರದ್ವಾಜ, ವಿಶ್ವಾಮಿತ್ರ, ಗೌತಮ, ಜಮದಗ್ನಿ ಮತ್ತು ವಸಿಷ್ಠ ಇವರು ಸಪ್ತರ್ಷಿಗಳಾಗಿದ್ದಾರೆ.

೩. ಉದ್ದೇಶ
ಅ. ಯಾವ ಋಷಿಗಳು ತಮ್ಮ ತಪೋಬಲದಿಂದ ಜಗತ್ತಿನಲ್ಲಿರುವ ಮಾನವರ ಮೇಲೆ ಅನಂತ ಉಪಕಾರಗಳನ್ನು ಮಾಡಿದ್ದಾರೆಯೋ, ಮಾನವರ ಜೀವನಕ್ಕೆ ಯೋಗ್ಯ ದಿಶೆಯನ್ನು ಕೊಟ್ಟಿದ್ದಾರೆಯೋ, ಅಂತಹ ಋಷಿಗಳನ್ನು ಈ ದಿನದಂದು ಸ್ಮರಿಸಲಾಗುತ್ತದೆ. - ಪ.ಪೂ. ಪರಶರಾಮ ಪಾಂಡೆ ಮಹಾರಾಜರು, ಸನಾತನ ಆಶ್ರಮ, ದೇವದ, ಪನವೇಲ.
ಆ. ಮಾಸಿಕ ಋತು, ಅಶೌಚ ಮತ್ತು ಸ್ಪರ್ಶಾಸ್ಪರ್ಶದಿಂದ ಸ್ತ್ರೀಯರ ಮೇಲಾಗುವ ಪರಿಣಾಮಗಳು ಈ ವ್ರತದಿಂದ, ಹಾಗೆಯೇ ಗೋಕುಲಾಷ್ಟಮಿಯ ಉಪವಾಸದಿಂದಲೂ ಕಡಿಮೆಯಾಗುತ್ತವೆ. (ಪುರುಷರ ಮೇಲಾಗುವ ಪರಿಣಾಮಗಳು ಕ್ಷೌರಾದಿ ಪ್ರಾಯಶ್ಚಿತ್ತ ಕರ್ಮಗಳಿಂದ ಮತ್ತು ವಾಸ್ತುವಿನ ಮೇಲಾಗುವ ಪರಿಣಾಮಗಳು ಉದಕಶಾಂತಿಯಿಂದ ಕಡಿಮೆಯಾಗುತ್ತವೆ.)

೪. ವ್ರತ ಮಾಡುವ ಪದ್ಧತಿ
ಅ. ಈ ದಿನದಂದು ಸ್ತ್ರೀಯರು ಬೆಳಗ್ಗೆ ಆಘಾಡಿಯ ಕಡ್ಡಿಯಿಂದ (ಒಂದು ವನಸ್ಪತಿ) ಹಲ್ಲುಜ್ಜಬೇಕು.
ಆ. ಸ್ನಾನದ ನಂತರ ಪೂಜೆಯ ಮೊದಲು ‘ಮಾಸಿಕ ಋತುಸ್ರಾವದ ಸಮಯದಲ್ಲಿ ತಿಳಿದು ಅಥವಾ ತಿಳಿಯದೇ ಮಾಡಿದ ಸ್ಪರ್ಶಗಳಿಂದ ಯಾವ ದೋಷಗಳು ತಗಲುತ್ತವೆಯೋ, ಅವುಗಳ ನಿವಾರಣೆಗಾಗಿ ಅರುಂಧತಿಯೊಂದಿಗೆ ಸಪ್ತರ್ಷಿಗಳನ್ನು ಪ್ರಸನ್ನಗೊಳಿಸಲು ನಾನು ಈ ವ್ರತವನ್ನು ಮಾಡುತ್ತಿದ್ದೇನೆ’, ಎಂದು ಸಂಕಲ್ಪವನ್ನು ಮಾಡಬೇಕು.
ಇ. ಮಣೆಯ ಮೇಲೆ ಅಕ್ಕಿಯ ಎಂಟು ಗುಡ್ಡೆಗಳನ್ನು ಮಾಡಿ ಅವುಗಳ ಮೇಲೆ ಎಂಟು ಅಡಿಕೆಯನ್ನಿಟ್ಟು ಕಶ್ಯಪಾದಿ ಸಪ್ತಋಷಿ ಮತ್ತು ಅರುಂಧತಿಯರ ಆವಾಹನೆ ಮತ್ತು ಷೋಡಶೋಪಚಾರ ಪೂಜೆಯನ್ನು ಮಾಡಬೇಕು.
ಈ. ಈ ದಿನದಂದು ಗೆಡ್ಡೆಗೆಣಸುಗಳ ಆಹಾರವನ್ನು ತೆಗೆದುಕೊಳ್ಳಬೇಕು ಮತ್ತು ಎತ್ತುಗಳ ಶ್ರಮದಿಂದ ತಯಾರಾದ ಯಾವುದೇ ಆಹಾರವನ್ನು ಸ್ವೀಕರಿಸಬಾರದು ಎಂದು ಹೇಳಲಾಗಿದೆ.
ಉ. ಮರುದಿನ ಕಶ್ಯಪಾದಿ ಸಪ್ತಋಷಿ ಮತ್ತು ಅರುಂಧತಿಯ ವಿಸರ್ಜನೆಯನ್ನು ಮಾಡಬೇಕು.

ಹನ್ನೆರಡು ವರ್ಷಗಳ ನಂತರ ಅಥವಾ ಐವತ್ತನೆಯ ವಯಸ್ಸಿನ ನಂತರ ಈ ವ್ರತದ ಉದ್ಯಾಪನೆ ಮಾಡಬಹುದು. ಉದ್ಯಾಪನೆಯ ನಂತರವೂ ಈ ವ್ರತವನ್ನು ಮುಂದುವರಿಸಬಹುದು.

(ಆಧಾರ : ಸನಾತನ ಸಂಸ್ಥೆಯ ಗ್ರಂಥ "ಹಬ್ಬ, ಧಾರ್ಮಿಕ ಉತ್ಸವ ಮತ್ತು ವ್ರತಗಳು")

ಆಷಾಢ ಏಕಾದಶಿ

ಪ್ರಕಾರ: ಆಷಾಢ ಮಾಸದ ಶುಕ್ಲ ಪಕ್ಷದಲ್ಲಿನ ಏಕಾದಶಿಯನ್ನು ‘ದೇವಶಯನಿ (ದೇವರ ನಿದ್ರೆಯ) ಏಕಾದಶಿ’ ಎನ್ನುತ್ತಾರೆ ಮತ್ತು ಕೃಷ್ಣ ಪಕ್ಷದಲ್ಲಿನ ಏಕಾದಶಿಯನ್ನು ‘ಕಾಮಿಕಾ ಏಕಾದಶಿ’ ಎನ್ನುತ್ತಾರೆ.

ಇತಿಹಾಸ: ಹಿಂದೆ ದೇವ ಮತ್ತು ದಾನವರಲ್ಲಿ ಯುದ್ಧ ಪ್ರಾರಂಭವಾಯಿತು. ಕುಂಭದೈತ್ಯನ ಮಗನಾದ ಮೃದುಮಾನ್ಯನು ತಪಸ್ಸು ಮಾಡಿ ಶಂಕರನಿಂದ ಅಮರತ್ವವನ್ನು ಪಡೆದನು. ಆದ್ದರಿಂದ ಅವನು ಬ್ರಹ್ಮದೇವ, ವಿಷ್ಣು, ಶಿವರಂತಹ ಎಲ್ಲ ದೇವತೆಗಳಿಗೆ ಅಜೇಯ ನಾದನು. ದೇವತೆಗಳು ಅವನ ಭಯದಿಂದ ತ್ರಿಕುಟ ಪರ್ವತದ ಮೇಲೆ ಧಾತ್ರಿ (ನೆಲ್ಲಿಕಾಯಿ) ವೃಕ್ಷದ ಕೆಳಗೆ ಒಂದು ಗುಹೆಯಲ್ಲಿ ಅಡಗಿ ಕುಳಿತರು. ಆ ಆಷಾಢ ಏಕಾದಶಿಯಂದು ಅವರಿಗೆ ಉಪವಾಸ ಮಾಡಬೇಕಾಯಿತು. ಮಳೆಯ ನೀರಿನಲ್ಲಿ ಸ್ನಾನವಾಯಿತು. ಆಕಸ್ಮಿಕವಾಗಿ ಅವರೆಲ್ಲರ ಶ್ವಾಸದಿಂದ ಒಂದು ಶಕ್ತಿಯು ಉತ್ಪನ್ನವಾಯಿತು. ಆ ಶಕ್ತಿಯು ಗುಹೆಯ ಬಾಗಿಲಿನಲ್ಲಿ ಕಾಯುತ್ತಿದ್ದ ಮೃದುಮಾನ್ಯ ದೈತ್ಯನನ್ನು ವಧಿಸಿತು. ಈ ಶಕ್ತಿದೇವಿಯೇ ಏಕಾದಶಿಯ ದೇವತೆಯಾಗಿದ್ದಾಳೆ.

ಮಹತ್ವ
ಅ. ಆಷಾಢ ಏಕಾದಶಿ ವ್ರತದಲ್ಲಿ ಎಲ್ಲ ದೇವತೆಗಳ ತೇಜಸ್ಸು ಒಂದಾಗಿರುತ್ತದೆ.
ಆ. ಕಾಮಿಕಾ ಏಕಾದಶಿಯು ಮನೋಕಾಮನೆಯನ್ನು ಪೂರ್ಣಗೊಳಿಸುವ ಏಕಾದಶಿಯಾಗಿದೆ. ಇದು ಪುತ್ರದಾಯೀ ಏಕಾದಶಿಯಾಗಿದೆ.

ವ್ರತವನ್ನು ಮಾಡುವ ಪದ್ಧತಿ: ಮೊದಲನೆಯ ದಿನ ದಶಮಿಗೆ ಏಕಭುಕ್ತವಿರಬೇಕು. ಏಕಾದಶಿಯಂದು ಪ್ರಾತಃಸ್ನಾನ ಮಾಡಿ ತುಳಸಿಯನ್ನು ಅರ್ಪಿಸಿ ವಿಷ್ಣುವಿನ ಪೂಜೆಯನ್ನು ಮಾಡಬೇಕು. ಪೂರ್ಣದಿವಸ ಉಪವಾಸ ಮಾಡಬೇಕು. ರಾತ್ರಿ ಹರಿಭಜನೆಯೊಂದಿಗೆ ಜಾಗರಣೆ ಮಾಡಬೇಕು. ಆಷಾಢ ಶುಕ್ಲ ದ್ವಾದಶಿಗೆ ವಾಮನನನ್ನು ಪೂಜಿಸಿ ಪಾರಣೆ ಮಾಡಬೇಕು. (೧೪)
ಈ ಎರಡೂ ದಿನಗಳಂದು ಶ್ರೀವಿಷ್ಣುವನ್ನು ‘ಶ್ರೀಧರ’ ಎನ್ನುವ ಹೆಸರಿನಿಂದ ಪೂಜಿಸಿ ಅಹೋರಾತ್ರಿ ತುಪ್ಪದ ದೀಪವನ್ನು ಉರಿಸುವ ವಿಧಿಯನ್ನು ಮಾಡುತ್ತಾರೆ.

ಪಂಢರಪುರದ ಯಾತ್ರೆ (ವಾರಿ): ಈ ವ್ರತವನ್ನು ಆಷಾಢ ಶುಕ್ಲ ಏಕಾದಶಿಯಿಂದ ಪ್ರಾರಂಭಿಸುತ್ತಾರೆ. ವಾರಕರಿ (ವಿಠಲನ ಭಕ್ತರು) ಸಂಪ್ರದಾಯವು ವೈಷ್ಣವ ಸಂಪ್ರದಾಯದಲ್ಲಿನ ಪ್ರಮುಖ ಸಂಪ್ರದಾಯವಾಗಿದೆ. ಈ ಸಂಪ್ರದಾಯದಲ್ಲಿ ವಾರ್ಷಿಕ, ಅರ್ಧವಾರ್ಷಿಕ ಹೀಗೆ ಪಡೆದಿರುವ ದೀಕ್ಷೆಯ ವಿಧಕ್ಕನುಸಾರವಾಗಿ ಯಾತ್ರೆಯನ್ನು ಮಾಡುತ್ತಾರೆ. ಈ ಯಾತ್ರೆಯನ್ನು ಕಾಲ್ನಡಿಗೆಯಿಂದ ಮಾಡಿದರೆ ಶಾರೀರಿಕ ತಪಸ್ಸಾಗುತ್ತದೆ ಎಂದು ನಂಬಲಾಗುತ್ತದೆ.
(ಆಧಾರ : ಸನಾತನ ಸಂಸ್ಥೆಯ ಗ್ರಂಥ "ಹಬ್ಬ, ಧಾರ್ಮಿಕ ಉತ್ಸವ ಮತ್ತು ವ್ರತಗಳು")

ವರ್ಷದ ಇಪ್ಪತ್ನಾಲ್ಕು ಏಕಾದಶಿಗಳಲ್ಲಿ ಆಷಾಢ ಏಕಾದಶಿಯ ಮಹತ್ವವು ಮುಂದಿನಂತಿದೆ.
ಅ. ಈ ತಿಥಿಗೆ ಏಕಾದಶೀದೇವಿಯ ಉತ್ಪತ್ತಿಯಾಯಿತು.
ಆ. ಈ ತಿಥಿಯಂದು ಚಾತುರ್ಮಾಸವು ಪ್ರಾರಂಭವಾಗುತ್ತದೆ.
ಇ. ಇದೇ ದಿನ ಶ್ರೀವಿಷ್ಣು ಕ್ಷೀರಸಾಗರದಲ್ಲಿ ಯೋಗನಿದ್ರೆಯಲ್ಲಿ ಲೀನನಾಗುತ್ತಾನೆ.
ಈ. ಇದೇ ತಿಥಿಗೆ ಶ್ರೀ ವಿಠ್ಠಲನು ಭಕ್ತ ಪುಂಡಲೀಕನನ್ನು ಭೇಟಿಯಾಗಲು ಪಂಢರಪುರಕ್ಕೆ ಬಂದನು.

ಅ. ಆಷಾಢ ಏಕಾದಶಿಯಂದು ಚೈತನ್ಯವು ಅಪ್ರಕಟವಾಗಿರುವುದರಿಂದ ಬ್ರಹ್ಮಾಂಡಮಂಡಲದ ಮೇಲಿನ ಕೆಟ್ಟ ಶಕ್ತಿಗಳ ಪ್ರಭಾವ ತೋರಿಸುವ ಸೂಕ್ಷ್ಮಜ್ಞಾನದ ಚಿತ್ರ


೧. ‘ಸೂಕ್ಷ್ಮಜ್ಞಾನದ ಚಿತ್ರದ ಸತ್ಯತೆ: ಶೇ.೮೦
೨. ಸೂಕ್ಷ್ಮಜ್ಞಾನದ ಚಿತ್ರದಲ್ಲಿನ ತ್ರಾಸದಾಯಕ ಸ್ಪಂದನಗಳು: ಶೇ.೪’ - ಪ.ಪೂ.ಡಾ.ಆಠವಲೆ
೩. ‘ಸೂಕ್ಷ್ಮಜ್ಞಾನದ ಚಿತ್ರದಲ್ಲಿರುವ ಸ್ಪಂದನಗಳ ಪ್ರಮಾಣ: ಚೈತನ್ಯ ಶೇ.೨.೭೫, ಭೂಮಂಡಲದ ಸುತ್ತಲೂ ಇರುವ ತ್ರಾಸದಾಯಕ ಸ್ಪಂದನಗಳ ಪ್ರಮಾಣ ಶೇ.೩ ಮತ್ತು ತ್ರಾಸದಾಯಕ ಶಕ್ತಿ ಶೇ.೩

೪. ಇತರ ಅಂಶಗಳು

ಅ. ಆಷಾಢ ಏಕಾದಶಿಯು ಕಾಲಕ್ಕೆ ಸಂಬಂಧಿಸಿದೆ. ಆಷಾಢ ಶುಕ್ಲ ಏಕಾದಶಿಯಿಂದ ಕಾರ್ತಿಕ ಶುಕ್ಲ ಏಕಾದಶಿ ಈ ನಾಲ್ಕು ತಿಂಗಳುಗಳಲ್ಲಿ ದಕ್ಷಿಣಾಯನವು ನಡೆಯುತ್ತಿರುತ್ತದೆ. ಆದ್ದರಿಂದ ಈ ಕಾಲಾವಧಿಯು ದೇವತೆಗಳ ನಿದ್ರೆಯ ಕಾಲಾವಧಿಯಾಗಿದೆ ಎಂದು ಹೇಳುತ್ತಾರೆ.

ಆ. ಈ ಕಾಲಾವಧಿಯಲ್ಲಿ ದೇವತೆಗಳ ತತ್ತ್ವಗಳ ಸಗುಣ-ನಿರ್ಗುಣ ತತ್ತ್ವಗಳ ಸ್ಪಂದನಗಳ ಪ್ರಕ್ಷೇಪಣೆಯ ಕಾರ್ಯವು ಅಪ್ರಕಟ ಸ್ವರೂಪದಲ್ಲಿರುತ್ತದೆ. ಆದುದರಿಂದ ಭೂಮಂಡಲದ ಕಡೆಗೆ ಅವುಗಳ ಪ್ರಕ್ಷೇಪಣೆಯ ಪ್ರಮಾಣವು ಕಡಿಮೆಯಿರುತ್ತದೆ.

ಇ. ಈ ಕಾಲಾವಧಿಯಲ್ಲಿ ದೇವತೆಗಳ ತತ್ತ್ವಗಳು ಅಪ್ರಕಟ ಸ್ವರೂಪದಲ್ಲಿರುವುದರಿಂದ ವಾಯುಮಂಡಲ ಮತ್ತು ಬ್ರಹ್ಮಾಂಡ ಮಂಡಲಗಳಲ್ಲಿ, ಹಾಗೆಯೇ ಭೂಮಿಯ ಮೇಲೆ ಅಸುರೀ ಶಕ್ತಿಗಳ ಪ್ರಾಬಲ್ಯವು ಹೆಚ್ಚಾಗುತ್ತದೆ. ಇದರ ಪರಿಣಾಮವು ಭೂಮಿಯ ಮೇಲಿನ ಸಜೀವ ಸೃಷ್ಟಿಯ ಮೇಲೂ ಆಗುತ್ತದೆ. ಆಷಾಢ ಶುಕ್ಲ ಏಕಾದಶಿಯಂದು ಉಪವಾಸ, ಪೂಜಾವಿಧಿ, ವ್ರತ ಮುಂತಾದವುಗಳನ್ನು ಮಾಡುವುದರಿಂದ ಜೀವದ ಮೇಲಾಗುವ ಕೆಟ್ಟ ಶಕ್ತಿಗಳ ಆಕ್ರಮಣಗಳ ಪ್ರಮಾಣವು ಕಡಿಮೆಯಾಗುತ್ತದೆ.

ಈ. ಆಷಾಢ ಶುಕ್ಲ ಏಕಾದಶಿಯ ದಿನ ಶ್ರೀವಿಷ್ಣುವಿಗೆ ಪಾರ್ಥನೆ ಮತ್ತು ಅವನನ್ನು ಪೂಜಿಸುವುದರಿಂದ, ಹಾಗೆಯೇ ಇಡೀರಾತ್ರಿ ಅವನ ಎದುರಿಗೆ ತುಪ್ಪದ ದೀಪವನ್ನು ಹಚ್ಚುವುದರಿಂದ ಕೆಟ್ಟ ಶಕ್ತಿಗಳಿಂದ ವಾಸ್ತುವಿನ ರಕ್ಷಣೆಯಾಗುತ್ತದೆ.’
- ಕು.ಪ್ರಿಯಾಂಕಾ ಲೋಟಲೀಕರ, ಸನಾತನ ಸಂಸ್ಥೆ (ಕಾರ್ತಿಕ ಶು.೭, ಕಲಿಯುಗ ವರ್ಷ ೫೧೧೨ (೧೩.೧೧.೨೦೧೦))

(ಆಧಾರ : ಸನಾತನ ಸಂಸ್ಥೆಯ ಗ್ರಂಥ 'ಶ್ರೀ ವಿಠ್ಠಲ")

ಸಂಬಂಧಿತ ವಿಷಯಗಳು
ಕಾರ್ತಿಕ ಏಕಾದಶಿ
ಸಹೋದರ ಬಿದಿಗೆ (ಯಮದ್ವಿತೀಯಾ)
ಬಲಿಪಾಡ್ಯ (ದೀಪಾವಳಿ ಪಾಡ್ಯ)
ಶ್ರೀ ಲಕ್ಷ್ಮೀದೇವಿಗೆ ಮಾಡುವ ಪ್ರಾರ್ಥನೆ
ಲಕ್ಷ್ಮೀಪೂಜೆ (ಆಶ್ವಯುಜ ಅಮಾವಾಸ್ಯೆ)
ನರಕ ಚತುರ್ದಶಿ (ಆಶ್ವಯುಜ ಕೃಷ್ಣ ಚತುರ್ದಶಿ)
ಆಶ್ವಯುಜ ಕೃಷ್ಣ ತ್ರಯೋದಶಿ - ಧನತ್ರಯೋದಶಿ, ಧನ್ವಂತರಿ ಜಯಂತಿ, ಯಮದೀಪದಾನ
ದೀಪಾವಳಿ
ಗೋವತ್ಸ ದ್ವಾದಶಿ
ವ್ರತಗಳ ವಿಧಗಳು
ಶ್ರೀ ಗಣೇಶ : ಚತುರ್ಥಿ ಮಹತ್ವ
ಮಕರ ಸಂಕ್ರಾಂತಿ
ಗಣೇಶ ಜಯಂತಿ
ಮಹಾಶಿವರಾತ್ರಿ
ಹೋಳಿ ಉತ್ಸವ ಆಚರಿಸುವ ಪದ್ಧತಿ
ಹಿಂದೂಗಳ ಹೊಸ ವರ್ಷಾರಂಭ - ಯುಗಾದಿ
ಯುಗಾದಿಯಂದು ಏರಿಸುವ ಬ್ರಹ್ಮಧ್ವಜ
ಬೇವಿನ ಪ್ರಸಾದ
ಶ್ರೀರಾಮನವಮಿ
ಅಕ್ಷಯ ತೃತೀಯಾ (ತದಿಗೆ)
Dharma Granth

ಶ್ರೀ ಗಣೇಶನ ಮೂರ್ತಿಯನ್ನು ಮನೆಗೆ ಹೇಗೆ ತರಬೇಕು?

ಶ್ರೀ ಗಣೇಶ ಚತುರ್ಥಿಗಾಗಿ ಪೂಜಿಸುವ ಶ್ರೀ ಗಣೇಶನ ಮೂರ್ತಿಯನ್ನು ಮನೆಗೆ ಹೇಗೆ ತರಬೇಕು?


೧. ಶ್ರೀ ಗಣೇಶಮೂರ್ತಿಯನ್ನು ಮನೆಗೆ ತರಲು ಮನೆಯಲ್ಲಿನ ಕರ್ತ (ಪ್ರಮುಖ) ಪುರುಷನು ಇತರರೊಂದಿಗೆ ಹೋಗಬೇಕು.

೨. ಮೂರ್ತಿಯನ್ನು ಕೈಯಲ್ಲಿ ತೆಗೆದುಕೊಳ್ಳುವವನು ಹಿಂದೂ ವೇಷಭೂಷಣವನ್ನು ಧರಿಸಬೇಕು, ಅಂದರೆ ನಿಲುವಂಗಿ (ಅಂಗಿ)-ಧೋತರ ಅಥವಾ ಜುಬ್ಬಾ (ಅಂಗಿ)-ಪೈಜಾಮಾವನ್ನು ಧರಿಸಬೇಕು. ತಲೆಯ ಮೇಲೆ ಟೊಪ್ಪಿಗೆಯನ್ನೂ ಹಾಕಿಕೊಳ್ಳಬೇಕು.

೩. ಮೂರ್ತಿಯನ್ನು ತರುವಾಗ ಅದರ ಮೇಲೆ ರೇಶ್ಮೆ, ಹತ್ತಿ (ನೂಲಿನ) ಅಥವಾ ಖಾದಿಯ ಸ್ವಚ್ಛ ಬಟ್ಟೆಯನ್ನು ಹಾಕಬೇಕು. ಮೂರ್ತಿಯನ್ನು ಮನೆಗೆ ತರುವಾಗ ಮೂರ್ತಿಯ ಮುಖವು ತರುವವನ ಕಡೆಗೆ ಮತ್ತು ಬೆನ್ನು ಮುಂದಿನ ಬದಿಗಿರಬೇಕು. ಮೂರ್ತಿಯ ಮುಂಭಾಗದಿಂದ ಸಗುಣ ತತ್ತ್ವ ಮತ್ತು ಹಿಂಭಾಗದಿಂದ ನಿರ್ಗುಣ ತತ್ತ್ವ ಪ್ರಕ್ಷೇಪಿಸುತ್ತಿರುತ್ತದೆ. ಮೂರ್ತಿಯನ್ನು ಕೈಯಲ್ಲಿ ತೆಗೆದುಕೊಳ್ಳುವವನು ಪೂಜಕನಾಗಿರುತ್ತಾನೆ. ಅವನು ಸಗುಣ ಕಾರ್ಯದ ಪ್ರತೀಕವಾಗಿದ್ದಾನೆ. ಮೂರ್ತಿಯ ಮುಖವನ್ನು ಅವನೆಡೆಗೆ ಮಾಡುವುದರಿಂದ ಅವನಿಗೆ ಸಗುಣ ತತ್ತ್ವದ ಲಾಭವಾಗುತ್ತದೆ ಮತ್ತು ಇತರರಿಗೆ ನಿರ್ಗುಣ ತತ್ತ್ವದ ಲಾಭವಾಗುತ್ತದೆ.

೪. ಶ್ರೀ ಗಣೇಶನ ಜಯಜಯಕಾರ ಮತ್ತು ಭಾವಪೂರ್ಣ ನಾಮಜಪ ಮಾಡುತ್ತಾ ಮೂರ್ತಿಯನ್ನು ಮನೆಗೆ ತರಬೇಕು.

೫. ಮನೆಯ ಹೊಸ್ತಿಲಿನ ಹೊರಗೆ ನಿಲ್ಲಬೇಕು. ಮನೆಯಲ್ಲಿನ ಮುತ್ತೈದೆಯು ಮೂರ್ತಿಯನ್ನು ತರುವವನ ಕಾಲುಗಳ ಮೇಲೆ ಮೊದಲು ಹಾಲು, ನಂತರ ನೀರನ್ನು ಹಾಕಬೇಕು.

೬. ಮನೆಯನ್ನು ಪ್ರವೇಶಿಸುವ ಮೊದಲು ಮೂರ್ತಿಯ ಮುಖವನ್ನು ಮುಂದಿನ ಬದಿಗೆ ಮಾಡಬೇಕು. ನಂತರ ಮೂರ್ತಿಗೆ ಆರತಿ ಬೆಳಗಬೇಕು.

೭. ಮನೆಯಲ್ಲಿ ಯಾವ ಸ್ಥಳದಲ್ಲಿ ಮೂರ್ತಿಯನ್ನು ಇಡಬೇಕಾಗಿರುತ್ತದೆಯೋ, ಅಲ್ಲಿ ಮಣೆಯ ಮೇಲೆ ಸ್ವಲ್ಪ ಅಕ್ಕಿಯನ್ನಿಟ್ಟು ಅದರ ಮೇಲೆ ಮೂರ್ತಿಯನ್ನಿಡಬೇಕು.

(ಆಧಾರ : ಸನಾತನ ಸಂಸ್ಥೆಯ ಗ್ರಂಥ 'ಶ್ರೀ ಗಣಪತಿ')

ಶ್ರೀ ಗಣೇಶನಿಗೆ ಸಂಬಂಧಿತ ಮಾಹಿತಿಗಳು
ಶ್ರೀ ಗಣೇಶನ ಪೂಜೆಯಲ್ಲಿ ಉಪಯೋಗಿಸುವ ವಿಶಿಷ್ಟ ವಸ್ತು - ದೂರ್ವೆ
ಶ್ರೀ ಗಣೇಶ ಚತುರ್ಥಿಯ ಬಗ್ಗೆ ನಿಮಗಿವು ತಿಳಿದಿವೆಯೇ?
ಶಾಸ್ತ್ರಕ್ಕನುಸಾರ ತಯಾರಿಸಿದ ಮೂರ್ತಿಯು ಏಕೆ ಸಾತ್ತ್ವಿಕವಾಗಿರುತ್ತದೆ?
ಮಣ್ಣಿನ ಗಣೇಶ ಮೂರ್ತಿಯನ್ನೇ ಪೂಜಿಸಿ!
ಗಣೇಶ ಚತುರ್ಥಿಯಂದು ಮಾಡಬೇಕಾದ ಕೃತಿಗಳು
ಬಲಮುರಿ ಮತ್ತು ಎಡಮುರಿ ಗಣಪತಿಯ ವಿಶೇಷತೆ
ಯುಗಗಳಿಗನುಸಾರ ಶ್ರೀ ಗಣೇಶನ ಅವತಾರಗಳು
ಗಣೇಶಮೂರ್ತಿಯನ್ನು ಯೋಗ್ಯ ಪದ್ಧತಿಯಲ್ಲಿ ವಿಸರ್ಜನೆ ಮಾಡಿ! 
ಶ್ರೀ ಗಣೇಶ : ಚತುರ್ಥಿ ಮಹತ್ವ
ಗಣೇಶ ಜಯಂತಿ
ಶ್ರೀ ಗಣೇಶ ಪೂಜಾವಿಧಿ

ಶ್ರೀ ಗಣೇಶನ ಕುರಿತು ಲಭ್ಯವಿರುವ ಸನಾತನ ಸಂಸ್ಥೆಯ ಗ್ರಂಥಗಳು
೧. ಶ್ರೀ ಗಣಪತಿ ಅಥರ್ವಶೀರ್ಷ ಮತ್ತು ಸಂಕಷ್ಟನಾಶನಸ್ತೋತ್ರ (ಅರ್ಥಸಹಿತ)
೨. ಶ್ರೀ ಗಣೇಶಮೂರ್ತಿ ಶಾಸ್ತ್ರಾನುಸಾರ ಇರಬೇಕು!
೩. ಶ್ರೀ ಗಣಪತಿ (ಕಿರುಗ್ರಂಥ)
೪. ಶ್ರೀ ಗಣೇಶ ಪೂಜಾವಿಧಿ (ಕೆಲವು ಮಂತ್ರಗಳ ಅರ್ಥಸಹಿತ)

ಇತರ ಧಾರ್ಮಿಕ ವಿಷಯಗಳು
ವ್ರತಗಳು
ವ್ರತಗಳ ವಿಧಗಳು 

ಗಣೇಶಭಕ್ತ "ಮೋರಯಾ ಗೋಸಾವಿ"


ಗಣಪತಿ ಬಪ್ಪಾ ಮೋರಯಾ, ಮಂಗಲಮೂರ್ತಿ ಮೋರಯಾ ಎಂಬ ಜಯಘೋಷದಲ್ಲಿ "ಮೋರಯಾ" ಎನ್ನುವುದು ಮೋರಯಾ ಗೋಸಾವಿ ಎಂಬ ಶ್ರೀ ಗಣೇಶನ ಭಕ್ತನ ಹೆಸರಾಗಿದೆ. ಭಕ್ತ ಮತ್ತು ಭಗವಂತನೊಂದಿಗೆ ಸಂಬಂಧವನ್ನು ಈ ಜಯಘೋಷವು ತೋರಿಸುತ್ತದೆ.

ಸಂಕ್ಷಿಪ್ತ ಚರಿತ್ರೆ
ಅ. ಜನ್ಮ : ಮೋರಯಾ ಗೋಸಾವಿ ಇವರ ಮನೆತನವು ಕರ್ನಾಟಕ ರಾಜ್ಯದಲ್ಲಿನ ಶಾಲಿ ಎಂಬ ಹಳ್ಳಿಯಲ್ಲಿತ್ತು. ಅವರ ತಂದೆಯ ಹೆಸರು ವಾಮನಭಟ್ಟ ಮತ್ತು ತಾಯಿಯ ಹೆಸರು ಪಾರ್ವತಿಬಾಯಿಯಾಗಿತ್ತು. ವಾಮನಭಟ್ಟರು ಗಣೇಶನ ಉಪಾಸಕರಾಗಿದ್ದರು. ಅವರು ಉಪಾಸನೆಗಾಗಿ ಮೋರಗಾವ ಎಂಬ ಊರಿನಲ್ಲಿ (ಮಹಾರಾಷ್ಟ್ರದ ಪುಣೆ ಜಿಲ್ಲೆ) ಗಣಪತಿ ಇರುವಲ್ಲಿ ಬಂದು ವಾಸಿಸಿದರು. ಅಲ್ಲಿ ೧೩೭೫ ರಲ್ಲಿ ಮೋರಯಾನ ಜನ್ಮವಾಯಿತು.

ಆ. ಕಠಿಣ ಸಾಧನೆ : ಮೋರಯಾನಿಗೆ ಎಂಟನೇ ವಯಸ್ಸಿನಲ್ಲಿ ಉಪನಯನವಾಯಿತು. ಉಪನಯನದ ನಂತರ ಅಧ್ಯಯನ ಮತ್ತು ಉಪಾಸನೆ ನಡೆಯುತ್ತಿರುವಾಗ ಮೋರಯಾ ಗೋಸಾವಿಗೆ ಸಿದ್ಧ ಯೋಗಿರಾಜ ಎಂಬ ಸದ್ಗುರುಗಳ ಭೇಟಿಯಾಯಿತು. ಅವರ ಉಪದೇಶದಂತೆ ಮೋರಯಾ ಥೇವೂರಿಗೆ (ಪುಣೆ ಜಿಲ್ಲೆ, ಮಹಾರಾಷ್ಟ್ರ) ಬಂದು ಕಠಿಣ ತಪಶ್ಚರ್ಯ ಮಾಡಿದನು. ೪೨ ದಿನಗಳ ಅಖಂಡ ನಾಮಜಪದ ನಂತರ ಶ್ರೀ ಗಣಪತಿಯು ಮೋರಯಾನಿಗೆ ದೃಷ್ಟಾಂತ ನೀಡಿದನು. ಅದರ ನಂತರ ಅವನು ಮೋರಗಾವಗೆ ಹಿಂತಿರುಗಿದನು.

ಇ. ಕೌಟುಂಬಿಕ ಜೀವನ : ತಂದೆ-ತಾಯಿಯರ ನಿಧನದ ನಂತರ ಅವರು ಮೋರಗಾವವನ್ನು ಬಿಟ್ಟು ಚಿಂಚವಡ (ಪುಣೆ ಜಿಲ್ಲೆ, ಮಹಾರಾಷ್ಟ್ರ) ದಲ್ಲಿ ವಾಸ್ತವ್ಯಕ್ಕಾಗಿ ಬಂದರು. ಅಲ್ಲಿ ಗೋವಿಂದರಾವ ಕುಲಕರ್ಣಿಯವರ ಮಗಳಾದ ಉಮಾ ಎಂಬ ಸುಲಕ್ಷಣ ಕನ್ಯೆಯೊಂದಿಗೆ ವಿವಾಹವಾಯಿತು. ನಂತರ ಅವರಿಗೆ ಪುತ್ರ ಪ್ರಾಪ್ತಿಯಾಯಿತು. ಮೋರಯಾ ಇವರು ಮಗನಿಗೆ ‘ಚಿಂತಾಮಣಿ’ ಎಂಬ ಹೆಸರನ್ನಿಟ್ಟರು.

ಈ. ಶ್ರೀ ಗಣೇಶನ ಸ್ವಪ್ನದೃಷ್ಟಾಂತ : ಪ್ರತಿಯೊಂದು ಚತುರ್ಥಿಗೆ ಮೋರಯಾ ಗೋಸಾವಿಯವರು ಮೋರಗಾವನಲ್ಲಿನ ಗಣಪತಿಯ ದರ್ಶನಕ್ಕೆ ಹೋಗುತ್ತಿದ್ದರು. ಒಂದು ದಿನ ಮಂಗಲಮೂರ್ತಿಯು ಅವರ ಸ್ವಪ್ನದಲ್ಲಿ ಬಂದು ‘ನೀನು ಇಷ್ಟು ದೂರ ಬರುವುದು ಬೇಡ. ಕನ್ಹಾ ನದಿಯಲ್ಲಿ ನಾನಿದ್ದೇನೆ. ಅಲ್ಲಿಂದ ನನ್ನನ್ನು ಹೊರಗೆ ತೆಗೆದು ನಿನ್ನ ಮನೆಗೆ ತೆಗೆದುಕೊಂಡು ಹೋಗು.’ ಈ ದೃಷ್ಟಾಂತದಂತೆ ಮೋರಯಾರವರು ಕನ್ಹಾ ನದಿಯಿಂದ ಆ ಗಣೇಶಮೂರ್ತಿಯನ್ನು ಚಿಂಚವಡದ ತಮ್ಮ ಮನೆಗೆ ತೆಗೆದುಕೊಂಡು ಹೋದರು ಮತ್ತು ಅದರ ಪ್ರತಿಷ್ಠಾಪನೆಯನ್ನು ಮಾಡಿದರು. ಮೋರಯಾ ಗೋಸಾವಿಯವರ ಸಾಧುತ್ವದ ಕೀರ್ತಿಯು ಎಲ್ಲೆಡೆ ಹರಡಿತು.

ಉ. ಸಮಾಧಿ : ಈ ಶ್ರೇಷ್ಠ ಗಣೇಶಭಕ್ತರು ೧೪೬೧ರಲ್ಲಿ ಚಿಂಚವಡದಲ್ಲಿ ತಮ್ಮ ೮೬ನೇ ವಯಸ್ಸಿನಲ್ಲಿ ಸಮಾಧಿ ತೆಗೆದುಕೊಂಡರು.

೨. ಮೋರಯಾ ಗೋಸಾವಿಯವರಿಗೆ ಶ್ರೀ ಗಣೇಶನೊಂದಿಗಿರುವ ಮುರಿಯಲಾರದ ಸಂಬಂಧವನ್ನು ತೋರಿಸುವ ಅನುಭೂತಿ: ಮಹಾರಾಷ್ಟ್ರದಲ್ಲಿ ‘ಮಂಗಲಮೂರ್ತಿ ಮೋರಯಾ’ ಎಂದು ಶ್ರೀ ಗಣಪತಿಯ ಜಯಘೋಷವನ್ನು ಮಾಡುತ್ತಾರೆ, ಅದರಲ್ಲಿರುವ ‘ಮೋರಯಾ’ ಎಂಬ ಶಬ್ದವನ್ನು ಮೋರಯಾ ಗೋಸಾವಿಯವರ ಹೆಸರಿನಿಂದ ತೆಗೆದುಕೊಂಡಿದ್ದಾರೆ. ಇದರಿಂದ ದೇವರು ಮತ್ತು ಭಕ್ತರ ಮುರಿಯದ ಸಂಬಂಧವು ಗಮನಕ್ಕೆ ಬರುತ್ತದೆ.

‘ಮೋರಯಾ ಗೋಸಾವಿ’ ಇವರ ಚಿತ್ರ ಬಿಡಿಸಲು ಪ್ರಾರಂಭ ಮಾಡಿದಾಗ ನನ್ನ ಕುಲದೇವಿ ರೇಣುಕಾಮಾತೆಯ ನಾಮಜಪ ನಡೆಯುತ್ತಿತ್ತು. ಆದರೆ ಚಿತ್ರ ಬಿಡಿಸಿದ ನಂತರ ನನಗೆ ತಾನಾಗಿಯೇ ‘ಶ್ರೀ ಗಣೇಶಾಯ ನಮಃ|’ ಈ ನಾಮಜಪ ನಡೆಯುತ್ತಿರುವುದರ ಅರಿವಾಯಿತು.
 - ಕು.ಮಧುರಾ ಭೋಸಲೆ, ಸನಾತನ ಸಂಸ್ಥೆ.

(ಶಬ್ದ, ಸ್ಪರ್ಶ, ರೂಪ, ರಸ, ಗಂಧ ಮತ್ತು ಅವುಗಳಿಗೆ ಸಂಬಂಧಿಸಿದ ಶಕ್ತಿ ಒಂದೆಡೆ ಇರುತ್ತವೆ ಎಂಬುದು ಅಧ್ಯಾತ್ಮದಲ್ಲಿನ ಸಿದ್ಧಾಂತವಾಗಿದೆ. ಕು.ಮಧುರಾ ಭೋಸಲೆಯವರು ಮೋರಯಾ ಗೋಸಾವಿಯವರ ಚಿತ್ರ, ಅಂದರೆ ರೂಪವನ್ನು ಬಿಡಿಸುತ್ತಿರುವಾಗ ಅವರೊಂದಿಗೆ ಏಕರೂಪವಾಗಿದ್ದರಿಂದ ಅವರಲ್ಲಿ ‘ಶ್ರೀ ಗಣೇಶಾಯ ನಮಃ|’ ಎಂಬ ನಾಮಜಪ ನಡೆಯುತ್ತಿತ್ತು. ಅಂದರೆ ರೂಪದೊಂದಿಗೆ ಶಬ್ದವು ಜೊತೆಯಾಯಿತು. - ಸಂಕಲನಕಾರರು)

(ಆಧಾರ : ಸನಾತನ ಸಂಸ್ಥೆಯ ಗ್ರಂಥ 'ಶ್ರೀ ಗಣಪತಿ')

ಶ್ರೀ ಗಣೇಶನಿಗೆ ಸಂಬಂಧಿತ ಮಾಹಿತಿಗಳು
ಶಾಸ್ತ್ರಕ್ಕನುಸಾರ ತಯಾರಿಸಿದ ಮೂರ್ತಿಯು ಏಕೆ ಸಾತ್ತ್ವಿಕವಾಗಿರುತ್ತದೆ?
ಮಣ್ಣಿನ ಗಣೇಶ ಮೂರ್ತಿಯನ್ನೇ ಪೂಜಿಸಿ!
ಶಾಸ್ತ್ರೀಯ ಗಣೇಶಮೂರ್ತಿಯನ್ನೇ ಪೂಜಿಸಿ!
ಗಣೇಶ ಚತುರ್ಥಿಯ ಲಾಭ ಹೀಗೆ ಪಡೆಯಿರಿ!
ಯುಗಗಳಿಗನುಸಾರ ಶ್ರೀ ಗಣೇಶನ ಅವತಾರಗಳು
ಗಣೇಶಮೂರ್ತಿಯನ್ನು ಯೋಗ್ಯ ಪದ್ಧತಿಯಲ್ಲಿ ವಿಸರ್ಜನೆ ಮಾಡಿ! 
ಶ್ರೀ ಗಣೇಶ : ಚತುರ್ಥಿ ಮಹತ್ವ
ಗಣೇಶ ಜಯಂತಿ
ಶ್ರೀ ಗಣೇಶ ಪೂಜಾವಿಧಿ

ಸಂಬಂಧಿತ ವಿಷಯಗಳು
ವ್ರತಗಳು
ವ್ರತಗಳ ವಿಧಗಳು 

ಗಣೇಶಮೂರ್ತಿಯನ್ನು ಯೋಗ್ಯ ಪದ್ಧತಿಯಲ್ಲಿ ವಿಸರ್ಜನೆ ಮಾಡಿ!


ಶ್ರೀ ಗಣೇಶ ಮೂರ್ತಿಯನ್ನು ನೀರಿನ ಟ್ಯಾಂಕಿಯಲ್ಲಿ ವಿಸರ್ಜಿಸಬೇಡಿ!

ಇತ್ತೀಚೆಗೆ ಶ್ರೀ ಗಣೇಶ ಮೂರ್ತಿಗಳನ್ನು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ಮತ್ತು ಅಶಾಸ್ತ್ರೀಯ ರೂಪಗಳಲ್ಲಿ ತಯಾರಿಸಲಾಗುತ್ತಿದೆ. ಶ್ರೀಗಣೇಶ ಮೂರ್ತಿಯನ್ನು ಹರಿಯುವ ನೀರು/ಜಲಾಶಯಗಳಲ್ಲಿ ವಿಸರ್ಜಿಸುವುದು ಆವಶ್ಯಕ ವಾಗಿದೆ ಎಂದು ಶಾಸ್ತ್ರಗಳಲ್ಲಿ ಹೇಳಿದ್ದರೂ ಜಲ ಪ್ರದೂಷಣೆ, ನೀರಿನ ಕೊರತೆ ಇತ್ಯಾದಿ ಗಳಿಂದಾಗಿ ಕೆಲವು ಜನರು ಮೂರ್ತಿವಿಸರ್ಜನೆಯು ಒಂದು ಸಮಸ್ಯೆಯಾಗಿದೆ ಎಂದು ತಿಳಿಯುತ್ತಾರೆ. ಇದಕ್ಕೆ ಉಪಾಯವೆಂದು ರಾಜ್ಯ ಸರಕಾರವು ನೀರಿನ ಟ್ಯಾಂಕ್‌ವುಳ್ಳ ಲಾರಿಯನ್ನು ಮೂರ್ತಿ ವಿಸರ್ಜನೆಗೆ ಒದಗಿಸಿತ್ತು. ಇದು ಅಶಾಸ್ತ್ರೀಯ ಹಾಗೂ ಅಯೋಗ್ಯವಾಗಿದೆ. ಏಕೆಂದರೆ ಮೂರ್ತಿಯನ್ನು ಜಲಾಶಯದಲ್ಲಿಯೇ ವಿಸರ್ಜನೆ ಮಾಡಬೇಕು.

೧. ಅಧ್ಯಾತ್ಮಶಾಸ್ತ್ರಕ್ಕನುಸಾರ ತಯಾರಿಸಿದ ಶ್ರೀ ಗಣೇಶಮೂರ್ತಿಯು ಪರಿಸರಕ್ಕೆ ಅನುಕೂಲಕರವೇ ಆಗಿರುತ್ತದೆ!: ಅಧ್ಯಾತ್ಮಶಾಸ್ತ್ರಕ್ಕನುಸಾರ, ಅಂದರೆ ಮೂರ್ತಿ ಶಾಸ್ತ್ರಕ್ಕನುಸಾರ ಶ್ರೀಗಣೇಶನ ಮೂರ್ತಿಯು ಜೇಡಿಮಣ್ಣಿನಿಂದ ತಯಾರಿಸಿದ ಮತ್ತು ನೈಸರ್ಗಿಕ ಬಣ್ಣಗಳನ್ನು ಹಚ್ಚಿದ್ದಿರಬೇಕು. ಅದು ಪರಿಸರ ಸ್ನೇಹಿಯಾಗಿರುತ್ತದೆ.

೨. ಇಂತಹ ಮೂರ್ತಿ ವಿಸರ್ಜನೆಯಿಂದ ಜಲಪ್ರದೂಷಣೆಯಾಗದೇ ಆಧ್ಯಾತ್ಮಿಕ ಲಾಭವಾಗುವುದು: ಮೂರ್ತಿಯಲ್ಲಿರುವ ಚೈತನ್ಯದಿಂದ ಅದನ್ನು ಹರಿಯುವ ನೀರಿನಲ್ಲಿ ವಿಸರ್ಜನೆ ಮಾಡುವುದರಿಂದ ನೀರು ಪವಿತ್ರವಾಗುತ್ತದೆ. ಹರಿಯುವ ನೀರಿನಿಂದಾಗಿ ಈ ಪವಿತ್ರಕಗಳು ದೂರದ ವರೆಗೆ ಹೋಗಿ ಅನೇಕರಿಗೆ ಅದರ ಲಾಭ ವಾಗುತ್ತದೆ. ಈ ನೀರಿನ ಬಾಷ್ಪೀಭವನ ಆಗುವುದರಿಂದ ವಾತಾವರಣ ಸಾತ್ತ್ವಿಕವಾಗುತ್ತದೆ.

ಆಪತ್ಕಾಲದಲ್ಲಿ ಗಣೇಶನ ಮೂರ್ತಿಯನ್ನು ಹೇಗೆ ವಿಸರ್ಜಿಸಬೇಕು?: ಕೆಲವೊಂದು ಸ್ಥಳಗಳಲ್ಲಿ ಜಲಾಶಯಗಳಲ್ಲಿ (ಬಾವಿ, ಕೆರೆ, ನದಿ ಇತ್ಯಾದಿಗಳಲ್ಲಿ) ಗಣೇಶ ಮೂರ್ತಿಯ ವಿಸರ್ಜನೆಗೆ ಬೇಕಾಗುವಷ್ಟು ನೀರು ಇರುವುದಿಲ್ಲ ಅಥವಾ ಕಲುಷಿತವಾಗಿರುತ್ತದೆ. ಆಗ ಮುಂದಿನ ಉಪಾಯ ಮಾಡಬೇಕು.

೧. ಮೂರ್ತಿಯ ಪ್ರತಿಷ್ಠಾಪನೆಯನ್ನು ಮಾಡದೇ ಅಡಿಕೆಯನ್ನು ಇಟ್ಟು ಪೂಜೆ ಮಾಡಬೇಕು. ಅಡಿಕೆಯನ್ನು ಸ್ವಲ್ಪ ನೀರಿರುವ ಬಾವಿ ಅಥವಾ ಹಳ್ಳದಲ್ಲಿ ವಿಸರ್ಜಿಸಬಹುದು.

೨. ಶ್ರೀ ಗಣೇಶ ಚತುರ್ಥಿಗಾಗಿ ಧಾತುವಿನ (ಲೋಹದ) ಒಂದು ಹೊಸ ಮೂರ್ತಿಯನ್ನು ತಂದು ಅದಕ್ಕೆ ಪ್ರಾಣಪ್ರತಿಷ್ಠಾಪನೆ ಮಾಡಿ ಪೂಜಿಸಬೇಕು. ವಿಸರ್ಜನೆ ಸಮಯದಲ್ಲಿ ಇಂತಹ ಮೂರ್ತಿಯನ್ನು ನೀರಿನಲ್ಲಿ ವಿಸರ್ಜನೆ ಮಾಡುವ ಅವಶ್ಯಕತೆ ಇರುವುದಿಲ್ಲ, ಉತ್ತರ ಪೂಜೆಯಾದ ನಂತರ ಗಣಪತಿಯ ಕೈಯ ಮೇಲೆ ಅಕ್ಷತೆಯನ್ನು ಹಾಕಿ ಮೂರ್ತಿಯನ್ನು ಬಲಗೈಯಿಂದ ಆ ಸ್ಥಳದಿಂದ ಸ್ವಲ್ಪ ಸರಿಸಬೇಕು. ಅನಂತರ ಮೂರ್ತಿಯನ್ನು ಮನೆಯಲ್ಲಿನ ಯಾವುದಾದರೊಂದು ಪವಿತ್ರ ಸ್ಥಳದಲ್ಲಿ ಇಡಬೇಕು. ಉತ್ತರಪೂಜೆಯ ನಂತರ ಆ ಮೂರ್ತಿಯ ಲ್ಲಿನ ದೈವತ್ವವೂ ವಿಸರ್ಜಿಸಲ್ಪಡುತ್ತದೆ. ಆದುದರಿಂದ ಇಂತಹ ಮೂರ್ತಿಯ ಪೂಜೆ ಯನ್ನು ಪ್ರತಿದಿನ ಮಾಡಬೇಕಾಗಿಲ್ಲ. ಮುಂದಿನ ವರ್ಷ ಮತ್ತೆ ಈ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಮಾಡಿ ಪೂಜಿಸಬಹುದು.

(ಹೆಚ್ಚಿನ ಮಾಹಿತಿಗಾಗಿ ಓದಿ ಸನಾತನ ಸಂಸ್ಥೆಯ ಗ್ರಂಥ ‘ಗಣಪತಿ’)

ಬರಪೀಡಿತ ಪ್ರದೇಶಗಳಲ್ಲಿ ಶ್ರೀ ಗಣೇಶಮೂರ್ತಿಯನ್ನು ವಿಸರ್ಜಿಸುವ ಬಗೆಗಿನ ಪರ್ಯಾಯಗಳು

ಅನೇಕ ಸ್ಥಳಗಳಲ್ಲಿ ಮಳೆಯಾಗದಿರುವುದರಿಂದ ನದಿ ಹಾಗೂ ಸರೋವರಗಳು ಬತ್ತಿ ಹೋಗುತ್ತವೆ. ಆದ್ದರಿಂದ ಶ್ರೀ ಗಣೇಶಮೂರ್ತಿಗಳನ್ನು ಧರ್ಮಶಾಸ್ತ್ರಕ್ಕನುಸಾರ ಹರಿಯುವ ನೀರಿನಲ್ಲಿ ವಿಸರ್ಜನೆ ಮಾಡಲು ಅಡಚಣೆಯುಂಟಾಗಬಹುದು. ಆಪತ್ಕಾಲ ನಡೆಯುತ್ತಿರುವುದರಿಂದ ಧಾರ್ಮಿಕ ಕೃತಿಗಳನ್ನು ಅಧ್ಯಾತ್ಮದಲ್ಲಿನ ತತ್ತ್ವಕ್ಕನುಸಾರ ಮಾಡಿದರೆ ಧರ್ಮಶಾಸ್ತ್ರ ಸಮ್ಮತವಾಗುತ್ತದೆ. ಆದ್ದರಿಂದ ಸದ್ಯದ ಬರಗಾಲದಲ್ಲಿ ಶ್ರೀ ಗಣೇಶಮೂರ್ತಿಯ ವಿಸರ್ಜನೆಗಾಗಿ ಈ ಮುಂದಿನ ಪರ್ಯಾಯಗಳನ್ನು ಅವಲಂಬಿಸಬಹುದು.

೧. ಸಣ್ಣ ಮೂರ್ತಿಯನ್ನು ಸ್ಥಾಪಿಸುವುದು
ಅ. ಪ್ರತಿವರ್ಷ ದೊಡ್ಡ ಮೂರ್ತಿಯನ್ನು ಸ್ಥಾಪಿಸುವ ಪರಂಪರೆಯಿದ್ದರೂ, ಬರಗಾಲದ ಪರಿಸ್ಥಿತಿಯಲ್ಲಿ ವಿಸರ್ಜನೆಗೆ ಸುಲಭವಾಗಬೇಕೆಂದು ಸಣ್ಣ (೬-೭ ಇಂಚು) ಮೂರ್ತಿಯನ್ನು ಪೂಜಿಸಬೇಕು.
ಆ. ಉತ್ತರಪೂಜೆಯ ನಂತರ ಈ ಮೂರ್ತಿಯನ್ನು ಮನೆಯ ಹೊರಗೆ ತುಳಸಿ ವೃಂದಾವನದ ಸಮೀಪ ಅಥವಾ ಅಂಗಳದಲ್ಲಿ ದೊಡ್ಡ ಪಾತ್ರೆಯಲ್ಲಿ ನೀರು ತುಂಬಿಸಿ ಅದರಲ್ಲಿ ವಿಸರ್ಜಿಸಬಹುದು. ಪಟ್ಟಣದ ಫ್ಲಾಟ್’ಗಳಲ್ಲಿ ವಾಸಿಸುವವರಿಗೆ ಈ ಮೇಲಿನ ಅನುಕೂಲಗಳಿಲ್ಲದಿರುವುದರಿಂದ ಅವರು ಮನೆಯ ಒಳಗೇ ದೊಡ್ಡ ಪಾತ್ರೆಯಲ್ಲಿ ನೀರು ತುಂಬಿಸಿ ಅದರಲ್ಲಿ ಮೂರ್ತಿಗಳನ್ನು ವಿಸರ್ಜಿಸಬಹುದು.
ಇ. ಮೂರ್ತಿಯು ನೀರಿನಲ್ಲಿ ಸಂಪೂರ್ಣ ಕರಗಿದ ನಂತರ ಆ ನೀರು ಮತ್ತು ಮಣ್ಣು ಕಾಲಿನಡಿ ಬರದಂತೆ ಮಂದಾರ, ಆಲದ ಮರ, ಅರಳಿಮರ ಇತ್ಯಾದಿ ಸಾತ್ತ್ವಿಕ ಮರಗಳ ಬುಡಕ್ಕೆ ಹಾಕಬೇಕು.

೨. ಸಣ್ಣ ಮೂರ್ತಿಯನ್ನು ಉಪಯೋಗಿಸುವ ಪರ್ಯಾಯ ಸಾಧ್ಯವಿಲ್ಲದಿದ್ದರೆ, ದೊಡ್ಡ ಮೂರ್ತಿಯ ಉತ್ತರಪೂಜೆ ಮಾಡಿ ಅದನ್ನು ಮನೆಯಲ್ಲಿಯೇ ಸಾತ್ತ್ವಿಕ ಸ್ಥಳದಲ್ಲಿ (ಉದಾ. ದೇವರಕೋಣೆಯ ಹತ್ತಿರ) ಇಡಬೇಕು. ಈ ಮೂರ್ತಿಗೆ ಪೂಜೆ ಮಾಡುವ ಅವಶ್ಯಕತೆಯಿಲ್ಲ. ಧೂಳು ಆವರಿಸಬಾರದೆಂದು ಅದನ್ನು ಒಂದು ಪೆಟ್ಟಿಗೆಯಲ್ಲಿ ಮುಚ್ಚಿಡಬೇಕು. ಮುಂದೆ ಹರಿಯುವ ನೀರು ಉಪಲಬ್ಧವಾದಾಗ ಅದನ್ನು ವಿಸರ್ಜಿಸಬೇಕು.

- ಶ್ರೀ.ದಾಮೋದರ ವಝೆ ಗುರೂಜಿ, ಸಂಚಾಲಕರು, ಸನಾತನ ಸಂಸ್ಥೆಯ ಸಾಧಕ-ಪುರೋಹಿತ ಪಾಠಶಾಲೆ.

ಶ್ರೀ ಗಣೇಶನಿಗೆ ಸಂಬಂಧಿತ ಮಾಹಿತಿಗಳು
ಶ್ರೀ ಗಣೇಶ ಚತುರ್ಥಿಯ ಬಗ್ಗೆ ನಿಮಗಿವು ತಿಳಿದಿವೆಯೇ?
ಶಾಸ್ತ್ರಕ್ಕನುಸಾರ ತಯಾರಿಸಿದ ಮೂರ್ತಿಯು ಏಕೆ ಸಾತ್ತ್ವಿಕವಾಗಿರುತ್ತದೆ?
ಮಣ್ಣಿನ ಗಣೇಶ ಮೂರ್ತಿಯನ್ನೇ ಪೂಜಿಸಿ!
ಶಾಸ್ತ್ರೀಯ ಗಣೇಶಮೂರ್ತಿಯನ್ನೇ ಪೂಜಿಸಿ!
ಗಣೇಶ ಚತುರ್ಥಿಯ ಲಾಭ ಹೀಗೆ ಪಡೆಯಿರಿ!
ಯುಗಗಳಿಗನುಸಾರ ಶ್ರೀ ಗಣೇಶನ ಅವತಾರಗಳು
ಶ್ರೀ ಗಣೇಶ : ಚತುರ್ಥಿ ಮಹತ್ವ
ಗಣೇಶ ಜಯಂತಿ
ಶ್ರೀ ಗಣೇಶ ಪೂಜಾವಿಧಿ

ಸಂಬಂಧಿತ ವಿಷಯಗಳು
ವ್ರತಗಳು
ವ್ರತಗಳ ವಿಧಗಳು 

ಯುಗಗಳಿಗನುಸಾರ ಶ್ರೀ ಗಣೇಶನ ಅವತಾರಗಳು

ಪ್ರತಿಯೊಂದು ದೇವತೆಯು ಒಂದು ತತ್ತ್ವವಾಗಿದೆ. ಈ ತತ್ತ್ವವು ಯುಗಾನುಯುಗ ಇರುತ್ತದೆ. ದೇವತೆಯ ತತ್ತ್ವವು ಆಯಾ ಕಾಲಕ್ಕೆ ಆವಶ್ಯಕವಾದ ಸಗುಣ ರೂಪದಲ್ಲಿ ಪ್ರಕಟವಾಗುತ್ತದೆ, ಉದಾ.ಭಗವಾನ ಶ್ರೀವಿಷ್ಣುವು ಕಾರ್ಯಕ್ಕನುಸಾರ ಧರಿಸಿದ ಒಂಬತ್ತು ಅವತಾರಗಳು. ಕಾಲಾನುಸಾರ ಶ್ರೀ ಗಣಪತಿಯ ಯಾವ ಯಾವ ವಿವಿಧ ಅವತಾರಗಳಾದವು ಎಂಬುದನ್ನು ಮುಂದೆ ನೀಡಲಾಗಿದೆ.

ಅ. ‘ಮಹೋತ್ಕಟ-ವಿನಾಯಕ: 
ಇವನು ಕೃತಯುಗ, ಎಂದರೆ ಸತ್ಯಯುಗದಲ್ಲಿ ಕಶ್ಯಪ ಮತ್ತು ಅದಿತಿಯರಿಗೆ ಜನಿಸಿದನು. ಅವನು ದೇವಾಂತಕ ಮತ್ತು ನರಾಂತಕರೆಂಬ ರಾಕ್ಷಸರನ್ನು ವಧಿಸಿ ಧರ್ಮಸಂಸ್ಥಾಪನೆ ಮಾಡಿದನು ಮತ್ತು ಅವತಾರವನ್ನು ಸಮಾಪ್ತಿಗೊಳಿಸಿದನು.

ಆ. ಗುಣೇಶ (ಅಪವಾದ - ಗಜಾನನ): 
ತ್ರೇತಾಯುಗದಲ್ಲಿ ಗಣಪತಿಯು ಭಾದ್ರಪದ ಶುಕ್ಲ ಚತುರ್ಥಿಯ ದಿನ ಉಮಾಳ ಉದರದಿಂದ ಗುಣೇಶನೆಂಬ (ಅಪವಾದ - ಗಜಾನನ) ಹೆಸರಿನಿಂದ ಜನ್ಮ ತಾಳಿದನು. ಈ ಅವತಾರದಲ್ಲಿ ಅವನು ಸಿಂಧುದೈತ್ಯನನ್ನು ವಧಿಸಿ ಬ್ರಹ್ಮದೇವರ ಕನ್ಯೆಯರಾದ ಸಿದ್ಧಿ ಮತ್ತು ಬುದ್ಧಿಯರೊಂದಿಗೆ ವಿವಾಹ ಮಾಡಿಕೊಂಡನು.

ಇ. ಗಜಾನನ: 
ದ್ವಾಪರಯುಗದಲ್ಲಿ ಪಾರ್ವತಿಯ ಉದರದಿಂದ ಶ್ರೀ ಗಣಪತಿಯು ಗಜಾನನ ಎಂಬ ಹೆಸರಿನಿಂದ ಮತ್ತೆ ಜನ್ಮ ತಾಳಿದನು. ಈ ಅವತಾರದಲ್ಲಿ ಗಜಾನನನು ಸಿಂದುರಾಸುರನನ್ನು ವಧಿಸಿದನು ಮತ್ತು ಅವನ ಬಂಧೀವಾಸದಲ್ಲಿದ್ದ ಅನೇಕ ರಾಜರನ್ನು ಮತ್ತು ವೀರರನ್ನು ಮುಕ್ತ ಗೊಳಿಸಿದನು. ಇದೇ ಅವತಾರದಲ್ಲಿ ಗಜಾನನನು ವರೇಣ್ಯರಾಜನಿಗೆ ಯೋಗ ಮಾರ್ಗಪ್ರಕಾಶಕ, ಸರ್ವಸಿದ್ಧಿದಾಯಕ, ಅಜ್ಞಾನನಾಶಕ ಮತ್ತು ಮನುಷ್ಯ ಜೀವನದ ಉದ್ದೇಶವನ್ನು ಹೇಳುವ ‘ಗಣೇಶಗೀತೆ’ಯನ್ನು ಹೇಳಿದನು.

ಈ. ಧೂಮ್ರಕೇತು: 
ಕಲಿಯುಗದಲ್ಲಿ ಧೂಮ್ರಕೇತು ಅಥವಾ ಧೂಮ್ರವರ್ಣ ಎಂಬ ಹೆಸರಿನ ಗಣಪತಿಯ ನಾಲ್ಕನೆಯ ಅವತಾರವಾಗಲಿದೆ ಮತ್ತು ಅವನು ಮ್ಲೇಂಚ್ಫರನ್ನು (ದುರ್ಜನರ) ನಾಶ ಮಾಡಲಿದ್ದಾನೆ ಎಂದು ಭವಿಷ್ಯಪುರಾಣದಲ್ಲಿ ಹೇಳಲಾಗಿದೆ.

(ಆಧಾರ ಗ್ರಂಥ: ಸನಾತನ ಸಂಸ್ಥೆಯ ಗ್ರಂಥ ‘ಶ್ರೀ ಗಣಪತಿ’)

ಶ್ರೀ ಗಣೇಶನಿಗೆ ಸಂಬಂಧಿತ ಮಾಹಿತಿಗಳು
ಶ್ರೀ ಗಣೇಶ ಚತುರ್ಥಿಯ ಬಗ್ಗೆ ನಿಮಗಿವು ತಿಳಿದಿವೆಯೇ?
ಶಾಸ್ತ್ರಕ್ಕನುಸಾರ ತಯಾರಿಸಿದ ಮೂರ್ತಿಯು ಏಕೆ ಸಾತ್ತ್ವಿಕವಾಗಿರುತ್ತದೆ?
ಮಣ್ಣಿನ ಗಣೇಶ ಮೂರ್ತಿಯನ್ನೇ ಪೂಜಿಸಿ!
ಶಾಸ್ತ್ರೀಯ ಗಣೇಶಮೂರ್ತಿಯನ್ನೇ ಪೂಜಿಸಿ!
ಗಣೇಶ ಚತುರ್ಥಿಯ ಲಾಭ ಹೀಗೆ ಪಡೆಯಿರಿ!
ಯುಗಗಳಿಗನುಸಾರ ಶ್ರೀ ಗಣೇಶನ ಅವತಾರಗಳು
ಗಣೇಶಮೂರ್ತಿಯನ್ನು ಯೋಗ್ಯ ಪದ್ಧತಿಯಲ್ಲಿ ವಿಸರ್ಜನೆ ಮಾಡಿ! 
ಶ್ರೀ ಗಣೇಶ : ಚತುರ್ಥಿ ಮಹತ್ವ
ಗಣೇಶ ಜಯಂತಿ
ಶ್ರೀ ಗಣೇಶ ಪೂಜಾವಿಧಿ

ಸಂಬಂಧಿತ ವಿಷಯಗಳು
ವ್ರತಗಳು
ವ್ರತಗಳ ವಿಧಗಳು 

ಗಣೇಶ ಚತುರ್ಥಿಯ ಲಾಭ ಹೀಗೆ ಪಡೆಯಿರಿ!


ಶ್ರೀ ಗಣೇಶ ಚತುರ್ಥಿಯನ್ನು ಮನೆಯಲ್ಲಿ ಧಾರ್ಮಿಕವಾಗಿ ಆಚರಿಸಿ ಗಣೇಶತತ್ತ್ವದ ಲಾಭವನ್ನು ಪಡೆದುಕೊಳ್ಳೋಣ!
ಗಣೇಶೋತ್ಸವದ ನಿಮಿತ್ತ ನಾವೆಲ್ಲರೂ ಒಂದಾಗುತ್ತೇವೆ. ನಮ್ಮ ಮನೆಗೆ ಗಣಪತಿ ಬರುವವನಿದ್ದಾನೆ ಎಂಬ ಕಲ್ಪನೆಯಿಂದ ನಮ್ಮ ಮನಸ್ಸು ತುಂಬಿರುತ್ತದೆ. ಕೆಲವು ಕುಟುಂಬಗಳಲ್ಲಿಯಂತೂ ಶ್ರೀ ಗಣೇಶ ಚತುರ್ಥಿಯ ಸಿದ್ಧತೆಯು ಒಂದು ತಿಂಗಳ ಮೊದಲೇ ಪ್ರಾರಂಭವಾಗಿರುತ್ತದೆ. ಸಂಪೂರ್ಣ ಮನೆಯ ಸ್ವಚ್ಛತೆ ಮಾಡುವುದು, ಮನೆಗೆ ಬಣ್ಣ ಹಚ್ಚುವುದು ಮುಂತಾದ ಸೇವೆಗಳು ಪ್ರಾರಂಭವಾಗಿರುತ್ತವೆ. ಆದರೆ ನಾವು ಉತ್ಸವದ ಮನೋರಂಜನೆಯಲ್ಲಿ ಯಾವಾಗ ಮುಳುಗಿ ಹೋಗುತ್ತೇವೆಯೋ ಗೊತ್ತಾಗುವುದಿಲ್ಲ. ಇದರಿಂದ ಗಣಪತಿಯು ಮನೆಯಲ್ಲಿದ್ದಾನೆ ಎಂದು ನಾವು ಮರೆತು ಬಿಡುತ್ತೇವೆ. ಈ ಉತ್ಸವದಲ್ಲಿ ನಾವು ನಮ್ಮ ಅಯೋಗ್ಯ ಕೃತಿಗಳನ್ನು ಸರಿಪಡಿಸಿ ಕೆಳಗಿನಂತೆ ಕೃತಿ ಮಾಡಿದರೆ ಶ್ರೀ ಗಣೇಶನಿಂದ ಆಧ್ಯಾತ್ಮಿಕ ಲಾಭ ದೊರಕುವುದು.

ಗಣೇಶಚತುರ್ಥಿಯಂದು ಶಾಸ್ತ್ರಾನುಸಾರ ಶ್ರೀ ಗಣೇಶ ಮೂರ್ತಿಯ ಪೂಜೆ ಮಾಡುವ ಕಾಲಾವಧಿ
ಶಾಸ್ತ್ರಾನುಸಾರ ಭಾದ್ರಪದ ಶುಕ್ಲ ಚತುರ್ಥಿಗೆ ಮಣ್ಣಿನಿಂದ ಮಾಡಿದ ಶ್ರೀ ಗಣೇಶಮೂರ್ತಿಯನ್ನು ತಯಾರಿಸಬೇಕು. ಅದನ್ನು ಎಡ ಕೈಯಲ್ಲಿಟ್ಟು ಸಿದ್ಧಿವಿನಾಯಕನ ಹೆಸರಿನಲ್ಲಿ ಮೂರ್ತಿಗೆ ಪ್ರಾಣಪ್ರತಿಷ್ಠೆ ಮತ್ತು ಪೂಜೆ ಮಾಡಬೇಕು ಹಾಗೂ ಕೂಡಲೇ ಅದನ್ನು ವಿಸರ್ಜನೆ ಮಾಡಬೇಕು. ಕುಲಾಚಾರಕ್ಕನುಸಾರ ಶ್ರೀ ಗಣೇಶಮೂರ್ತಿಯನ್ನು ಒಂದೂವರೆ, ಐದು, ಏಳು, ಹತ್ತು ಅಥವಾ ಹನ್ನೊಂದನೇ ದಿನ ಪೂಜಿಸುತ್ತಾರೆ ಹಾಗೂ ಎರಡನೇ, ಐದನೇ, ಏಳನೇ ಅಥವಾ ಹತ್ತನೇ ದಿನ ಶ್ರೀ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಗುತ್ತದೆ.

ಶ್ರೀ ಗಣೇಶನ ಉಪಾಸನೆ ಎಲ್ಲರಿಗೂ ಲಾಭದಾಯಕವಾಗಿರಲು ಕಾರಣ
ಪೃಥ್ವಿ ಮತ್ತು ಆಪ ತತ್ತ್ವಗಳ ಇಚ್ಛಾ ಲಹರಿಗಳೊಂದಿಗೆ ಶ್ರೀ ಗಣೇಶನ ಸಂಬಂಧವಿದೆ. ಆದುದರಿಂದ ಶ್ರೀ ಗಣೇಶ ಪೂಜೆಯು ಸ್ತ್ರೀ ಹಾಗೂ ಪುರುಷರಿಗೆ ಲಾಭದಾಯಕವಾಗಿದೆ. ಶರೀರದಲ್ಲಿ ಸಾಧನೆ ಬಗ್ಗೆ ವಿಚಾರ ಲಹರಿಗಳ ಸಂಚಾರವಾಗುವುದಕ್ಕಾಗಿ ಶ್ರೀ ಗಣೇಶ ಪೂಜೆ ಸಹಾಯವಾಗುತ್ತದೆ. ಶ್ರೀ ಗಣೇಶ ಪೂಜೆಯ ಮೂಲಕ ಶರೀರದಲ್ಲಿ ಸತ್ತ್ವಗುಣ ಸಂವರ್ಧನೆಯಾಗುವುದು ಹಾಗೂ ಸಾಧನೆಯ ವಿಚಾರ ವೃದ್ಧಿಯಾಗುವುದು. ಆದುದರಿಂದ ಶ್ರೀ ಗಣೇಶೋತ್ಸವದ ಸಮಯದಲ್ಲಿ ಎಷ್ಟು ದಿನ ಶ್ರೀಗಣೇಶ ಪೂಜೆ ಮಾಡಲಾಗುವುದೋ, ಅಷ್ಟು ದಿನ ಕುಟುಂಬದ ಎಲ್ಲ ಸದಸ್ಯರು ಒಟ್ಟಾಗುತ್ತಾರೆ ಹಾಗೂ ಕುಲಾಚಾರಕ್ಕನುಸಾರ ಪೂಜೆ, ಅರ್ಚನೆ ಇತ್ಯಾದಿ ಮಾಡುತ್ತಾರೆ.

ಶ್ರೀ ಗಣೇಶೋತ್ಸವದ ವೇಳೆ ಮಾಡಬೇಕಾದ ಧಾರ್ಮಿಕ ಕೃತಿಗಳು
೧. ಪ್ರತಿದಿನ ಅಂಗಳದಲ್ಲಿ ಅಥವಾ ಶ್ರೀಗಣೇಶಮೂರ್ತಿಯ ಎದುರು ಗಣೇಶ ತತ್ತ್ವವನ್ನು ಆಕರ್ಷಿಸುವ ರಂಗೋಲಿ ಹಾಕಬೇಕು. ಇಂತಹ ಸಾತ್ತ್ವಿಕ ರಂಗೋಲಿಗಳ ನಮೂನೆಗಳು ಸನಾತನ ಸಂಸ್ಥೆ ನಿರ್ಮಿಸಿದ ಕಿರುಗ್ರಂಥಗಳಲ್ಲಿವೆ.
೨. ಪ್ರತಿದಿನ ಬೆಳಗ್ಗೆ ಹಾಗೂ ಸಾಯಂ ಕಾಲ ಶ್ರೀಗಣೇಶನಿಗೆ ಪೂಜೆ ಮಾಡಬೇಕು.
೩. ಪೂಜೆಯ ನಂತರ ಮನೆಯ ಎಲ್ಲ ಸದಸ್ಯರೊಂದಿಗೆ ಸೇರಿಕೊಂಡು ಶ್ರೀಗಣೇಶನಿಗೆ ಭಾವಪೂರ್ಣ ಆರತಿ ಮಾಡಬೇಕು.

ಮಂಟಪದ ಅಲಂಕಾರಕ್ಕಾಗಿ ‘ಥರ್ಮಾಕೋಲ್’ನ್ನು ಉಪಯೋಗಿಸಬಾರದು!
ಶ್ರೀ ಗಣೇಶನ ಮೂರ್ತಿಗಾಗಿ ಮಂಟಪವನ್ನು ತಯಾರಿಸುವಾಗ ‘ಥರ್ಮಾಕೋಲ್’ನ್ನು ಉಪಯೋಗಿಸಬಾರದು.
೧. ‘ಥರ್ಮಾಕೋಲ್’ ವಿಘಟನೆಯಾಗುವುದಿಲ್ಲ, ಅದರ ಬಳಕೆಯಿಂದ ಪರಿಸರವು ನಾಶವಾಗುತ್ತದೆ. ಹಾಗೆಯೇ ‘ಥರ್ಮಾಕೋಲ್’ನ್ನು ರಾಸಾಯನಿಕ ಪ್ರಕ್ರಿಯೆಯಿಂದ ತಯಾರಿಸಿದ್ದರಿಂದ ಅದು ರಜ-ತಮವಾಗಿದೆ. ಇಂತಹ ರಜ-ತಮ ಥರ್ಮಾಕೋಲ್ ಸಾತ್ತ್ವಿಕತೆಯನ್ನು ಗ್ರಹಿಸುವುದಿಲ್ಲ, ಅದರ ಬದಲು ಅದು ರಜ-ತಮ ಸ್ಪಂದನಗಳನ್ನು ಪ್ರಕ್ಷೇಪಿಸುತ್ತದೆ.
೨. ಮಂಟಪಕ್ಕಾಗಿ ಬಾಳೆಯ ದಿಂಡನ್ನು ಉಪಯೋಗಿಸಬೇಕು. ಬಾಳೆಯ ದಿಂಡಿನಿಂದ ತಯಾರಿಸಿದ ಮಂಟಪವು ಹೆಚ್ಚು ಸಾತ್ತ್ವಿಕವಾಗಿರುತ್ತದೆ.


ಶ್ರೀ ಗಣೇಶನ ಆರತಿ ಮಾಡುವಾಗ ಗಮನದಲ್ಲಿ ಇಡಬೇಕಾದ ಅಂಶಗಳು
೧. ಆರತಿಯ ವೇಳೆ ಎಲ್ಲರೂ ಸಾಲಾಗಿ ನಿಲ್ಲಬೇಕು.
೨. ಆರತಿಯನ್ನು ಮಧುರವಾಗಿ ಹಾಗೂ ನಿಧಾನವಾಗಿ ಹಾಡಬೇಕು.
೩. ನಾದ ನಿರ್ಮಾಣವಾಗುವುದಕ್ಕಾಗಿ ಮಂದಸ್ವರದಲ್ಲಿ ಚಪ್ಪಾಳೆ ಅಥವಾ ತಾಳ ಬಾರಿಸಬೇಕು.

ಆರತಿ ಹಾಡುವಾಗ ಮನಸ್ಸಿನಲ್ಲಿ ಈಶ್ವರನ ಅನುಸಂಧಾನವಿಡಲು ಪ್ರಯತ್ನಿಸಿರಿ. ಅನೇಕ ಆರತಿಗಳನ್ನು ಹಾಡದೇ ಒಂದೆರಡು ಒಳ್ಳೆಯ ಆರತಿಗಳನ್ನು ಆರಿಸಿ, ಅವುಗಳನ್ನು ಭಾವಪೂರ್ಣವಾಗಿ ಗಣೇಶ ಪ್ರತ್ಯಕ್ಷ ನಮ್ಮೊಂದಿಗಿದ್ದಾನೆ ಎಂಬ ಭಾವದಿಂದ ಹಾಡಬೇಕು. ಆರತಿಯಾಗುವಾಗ ಪರಸ್ಪರರೊಂದಿಗೆ ಮಾತನಾಡಬಾರದು. ಭಾವಪೂರ್ಣ ಆರತಿ ಮಾಡಿದರೆ ವಾಸ್ತುವಿನಲ್ಲಿ ಸಾತ್ತ್ವಿಕ ಸ್ಪಂದನ ನಿರ್ಮಾಣವಾಗುತ್ತದೆ. ಅದನ್ನು ಕಾಪಾಡಿಕೊಳ್ಳಲು ಹಾಗೂ ಅದರ ಲಾಭ ಪಡೆಯುವುದಕ್ಕಾಗಿ ಆರತಿಯ ನಂತರ ಸಾಮೂಹಿಕ ಪ್ರಾರ್ಥನೆ ಮಾಡಬೇಕು. ಪ್ರಾರ್ಥನೆಯ ನಂತರ ಸ್ವಲ್ಪ ಸಮಯ ಒಟ್ಟಿಗೆ ಕುಳಿತು ನಾಮಜಪ ಮಾಡಬೇಕು.

ಸಾಯಂಕಾಲ ಪುನಃ ಆರತಿ ಮಾಡಿ ಪರಿವಾರದ ಎಲ್ಲ ಸದಸ್ಯರು ಒಟ್ಟಾಗಿ ಕುಳಿತು ಶ್ರೀ ಗಣೇಶಸ್ತೋತ್ರ ಪಠಣ ಮತ್ತು ‘ಓಂ ಗಂ ಗಣಪತಯೇ ನಮಃ’ ನಾಮಜಪ ಮಾಡಬೇಕು. ಶ್ರೀ ಗಣೇಶೋತ್ಸವದ ಕಾಲದಲ್ಲಿ ಹಚ್ಚೆಚ್ಚು ಸಾಧನೆ ಮಾಡಿ ವಾತಾವರಣ ದಲ್ಲಿರುವ ಚೈತನ್ಯವನ್ನು ಗ್ರಹಣ ಮಾಡಿರಿ.

ಈ ಪದ್ಧತಿಯಲ್ಲಿ ಶ್ರೀಗಣೇಶನ ಉಪಾಸನೆ ಮಾಡುವವರಿಗೆ ಶೀಘ್ರವಾಗಿ ಫಲಪ್ರಾಪ್ತಿಯಾಗುವುದು. ಏಕೆಂದರೆ ಉಚ್ಚ ದೇವತೆಗಳ ಲೋಕಗಳಲ್ಲಿ ಗಣೇಶಲೋಕವು ಭೂಲೋಕಕ್ಕೆ ಹತ್ತಿರವಿದೆ. ಗಣೇಶಲಹರಿಗಳು ಇತರ ಉಚ್ಚ ದೇವತೆಗಳಿಗಿಂತ ಹೆಚ್ಚು ಪ್ರಮಾಣದಲ್ಲಿ ಭೂಮಿಯ ಮೇಲೆ ಕಾರ್ಯನಿರತವಾಗಿರುತ್ತವೆ. ಆದುದರಿಂದ ಗಣೇಶ ಲಹರಿಗಳು ಪೃಥ್ವಿಯ ಮೇಲೆ ವಾಸಿಸುವ ಜೀವಗಳ ಪ್ರಾರ್ಥನೆಯನ್ನು ಉಚ್ಚದೇವತೆಗಳಿಗೆ ತಲುಪಿಸುತ್ತವೆ. ಮಾನವನಿಗೆ ಉಚ್ಚ ದೇವತೆಗಳ ಸಮೀಪ ಹೋಗಲು ಸಾಧನೆ ಮಾಡಬೇಕು ಹಾಗೂ ದೇವತೆಗಳ ಬಗ್ಗೆ ಭಾವ ವೃದ್ಧಿಯಾಗುವ ಅವಶ್ಯಕತೆಯಿದೆ.

ಶ್ರೀ ಗಣೇಶೋತ್ಸವದ ಕಾಲದಲ್ಲಿ ಮಾಡಲ್ಪಡುವ ವಿವಿಧ ಧಾರ್ಮಿಕ ಕೃತಿಗಳು ಹಾಗೂ ಅವುಗಳಿಂದಾಗುವ ಲಾಭದ ಪ್ರಮಾಣವನ್ನು ಮುಂದೆ ಕೊಡಲಾಗಿದೆ -
೧. ಶ್ರೀಗಣೇಶನ ಪೂಜೆ ಮಾಡುವುದರಿಂದ ಶೇ. ೨೦ ರಷ್ಟು ಲಾಭ ವಾಗುತ್ತದೆ.
೨. ತಮ್ಮ ಶರೀರದಲ್ಲಿ ಗಣೇಶತತ್ತ್ವವನ್ನು ಆಕರ್ಷಿಸುವುದಕ್ಕಾಗಿ ಮಾಡಬೇಕಾದ ಆಚರಣೆ ಮಾಡಿದರೆ ಶೇ. ೨೦ ರಷ್ಟು ಲಾಭವಾಗುತ್ತದೆ.
೩. ಶ್ರೀಗಣೇಶನ ನಾಮಜಪ ಮಾಡಿದರೆ ಶೇ.೩೦ರಷ್ಟು ಹಾಗೂ ಶ್ರೀಗಣೇಶನ ವಿಡಂಬನೆಯನ್ನು ತಡೆಯುವುದರಿಂದ ಶೇ. ೩೦ ರಷ್ಟು ಲಾಭವಾಗುವುದು.
ಈ ರೀತಿ ಈ ನಾಲ್ಕು ಕೃತಿಗಳನ್ನು ಮಾಡಿದರೆ ಉಪಾಸಕನಿಗೆ ಒಟ್ಟು ಶೇ. ೧೦೦ ರಷ್ಟು ಲಾಭವಾಗುತ್ತದೆ.

ಗಣೇಶೋತ್ಸವದ ಸಮಯದಲ್ಲಿ ಮಾಡಬೇಕಾದ ಪ್ರಾರ್ಥನೆ
ಹೇ ಶ್ರೀ ಗಣೇಶಾ, ಗಣೇಶೋತ್ಸವದ ಸಮಯದಲ್ಲಿ ಎಂದಿಗಿಂತ ಸಾವಿರ ಪಟ್ಟು ಹೆಚ್ಚು ಕಾರ್ಯನಿರತವಾಗಿರುವ ನಿನ್ನ ತತ್ತ್ವದ ಲಾಭವು ನನಗೆ ಹೆಚ್ಚಿನ ಪ್ರಮಾಣದಲ್ಲಿ ಗ್ರಹಿಸುವಂತಾಗಲಿ. (ಪ್ರಾರ್ಥನೆಯ ಬಗ್ಗೆ ಸವಿಸ್ತಾರವಾದ ವಿವೇಚನೆ ಮತ್ತು ಜೀವನದಲ್ಲಿನ ವಿವಿಧ ಪ್ರಸಂಗಗಳಲ್ಲಿ ಮಾಡಬೇಕಾದ ಪ್ರಾರ್ಥನೆಗಳನ್ನು ಸನಾತನದ ‘ಪ್ರಾರ್ಥನೆ (ಮಹತ್ವ ಮತ್ತು ಉದಾಹರಣೆಗಳು)’ ಈ ಕಿರುಗ್ರಂಥದಲ್ಲಿ ನೀಡಲಾಗಿದೆ.)

(ಆಧಾರ : ಸಾಪ್ತಾಹಿಕ ಪತ್ರಿಕೆ "ಸನಾತನ ಪ್ರಭಾತ")

ಶ್ರೀ ಗಣೇಶನಿಗೆ ಸಂಬಂಧಿತ ಮಾಹಿತಿಗಳು
ಶ್ರೀ ಗಣೇಶ ಚತುರ್ಥಿಯ ಬಗ್ಗೆ ನಿಮಗಿವು ತಿಳಿದಿವೆಯೇ?
ಶಾಸ್ತ್ರಕ್ಕನುಸಾರ ತಯಾರಿಸಿದ ಮೂರ್ತಿಯು ಏಕೆ ಸಾತ್ತ್ವಿಕವಾಗಿರುತ್ತದೆ?
ಮಣ್ಣಿನ ಗಣೇಶ ಮೂರ್ತಿಯನ್ನೇ ಪೂಜಿಸಿ!
ಶಾಸ್ತ್ರೀಯ ಗಣೇಶಮೂರ್ತಿಯನ್ನೇ ಪೂಜಿಸಿ!
ಗಣೇಶ ಚತುರ್ಥಿಯಂದು ಮಾಡಬೇಕಾದ ಕೃತಿಗಳು
ಯುಗಗಳಿಗನುಸಾರ ಶ್ರೀ ಗಣೇಶನ ಅವತಾರಗಳು
ಗಣೇಶಮೂರ್ತಿಯನ್ನು ಯೋಗ್ಯ ಪದ್ಧತಿಯಲ್ಲಿ ವಿಸರ್ಜನೆ ಮಾಡಿ! 
ಶ್ರೀ ಗಣೇಶ : ಚತುರ್ಥಿ ಮಹತ್ವ
ಗಣೇಶ ಜಯಂತಿ
ಶ್ರೀ ಗಣೇಶ ಪೂಜಾವಿಧಿ

ಸಂಬಂಧಿತ ವಿಷಯಗಳು
ವ್ರತಗಳು
ವ್ರತಗಳ ವಿಧಗಳು 

ಶ್ರೀ ಗಣೇಶ ಚತುರ್ಥಿಯ ಬಗ್ಗೆ ನಿಮಗಿವು ತಿಳಿದಿವೆಯೇ?

 

ಗಣೇಶ ಚತುರ್ಥಿಯನ್ನು ಕುಟುಂಬದಲ್ಲಿ ಯಾರು ಆಚರಿಸಬೇಕು, ಗಣೇಶ ಚತುರ್ಥಿಯನ್ನು ಆಚರಿಸುವುದರ ಮಹತ್ವವೇನು, ಗಣೇಶ ಚತುರ್ಥಿಯಂದು ನೂತನ ಮೂರ್ತಿಯನ್ನು ಏಕೆ ತರಬೇಕು, ಗಣೇಶ ಮೂರ್ತಿಯು ಭಂಗವಾದರೆ ಅದರ ಪರಿಹಾರಗಳೇನು ಈ ವಿಷಯಗಳಿಗೆ ಸಂಬಂಧಪಟ್ಟ ಮಾಹಿತಿಯನ್ನು ಇಲ್ಲಿ ನೀಡುತ್ತಿದ್ದೇವೆ.

ಕುಟುಂಬದಲ್ಲಿ ಯಾರು ಆಚರಿಸಬೇಕು?

ಗಣೇಶ ಚತುರ್ಥಿಯಂದು ಆಚರಿಸಲಾಗುವ ವ್ರತವನ್ನು ‘ಸಿದ್ಧಿವಿನಾಯಕ ವ್ರತ’ ಎನ್ನುತ್ತಾರೆ. ವಾಸ್ತವದಲ್ಲಿ ಇದನ್ನು ಎಲ್ಲ ಕುಟುಂಬಗಳೂ ಆಚರಿಸಬೇಕು. ಅಣ್ಣ ತಮ್ಮಂದಿರೆಲ್ಲರೂ ಒಟ್ಟಿಗೆ ಇದ್ದರೆ, ಅಂದರೆ ಅವರ ದ್ರವ್ಯಕೋಶ ಮತ್ತು ಪಾಕನಿಷ್ಪತ್ತಿ (ಒಲೆ) ಒಟ್ಟಿಗೆ ಇದ್ದರೆ ಎಲ್ಲರೂ ಸೇರಿ ಒಂದೇ ಮೂರ್ತಿಯ ಪೂಜೆಯನ್ನು ಮಾಡಬೇಕು; ಆದರೆ ದ್ರವ್ಯಕೋಶ ಮತ್ತು ಪಾಕನಿಷ್ಪತ್ತಿಯು ಕಾರಣಾಂತರದಿಂದ ವಿಭಕ್ತವಾಗಿದ್ದರೆ (ಬೇರೆ ಬೇರೆ) ಪ್ರತಿಯೊಬ್ಬರೂ ಅವರವರ ಮನೆಗಳಲ್ಲಿ ಸ್ವತಂತ್ರವಾಗಿ ಗಣೇಶವ್ರತವನ್ನು ಆಚರಿಸಬೇಕು.

ಗಣೇಶಚತುರ್ಥಿಯ ಮಹತ್ವವೇನು?

ಆಷಾಢ ಹುಣ್ಣಿಮೆಯಿಂದ ಕಾರ್ತಿಕ ಹುಣ್ಣಿಮೆಯವರೆಗಿನ ೧೨೦ ದಿನಗಳ ಕಾಲದಲ್ಲಿ ವಿನಾಶಕಾರಿ, ತಮಪ್ರಧಾನ ಯಮಲಹರಿಗಳು ಪೃಥ್ವಿಯ ಮೇಲೆ ಹೆಚ್ಚು ಪ್ರಮಾಣದಲ್ಲಿ ಬರುತ್ತವೆ. ಈ ಸಮಯದಲ್ಲಿ ಅವುಗಳ ತೀವ್ರತೆಯೂ ಹೆಚ್ಚಿಗೆ ಇರುತ್ತದೆ. ಈ ಕಾಲಾವಧಿಯಲ್ಲಿ, ಅಂದರೆ ಭಾದ್ರಪದ ಶುಕ್ಲ ಚತುರ್ಥಿಯಿಂದ ಅನಂತ ಚತುರ್ದಶಿಯ ವರೆಗೆ ಗಣೇಶ ಲಹರಿಗಳು ಪೃಥ್ವಿಯ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ಬರುವುದರಿಂದ ಯಮಲಹರಿಗಳ ತೀವ್ರತೆ ಕಡಿಮೆಯಾಗಲು ಸಹಾಯವಾಗುತ್ತದೆ.
(ಈ ಲಹರಿಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ‘ಹಬ್ಬ,ಧಾರ್ಮಿಕ ಉತ್ಸವ ಮತ್ತು ವ್ರತಗಳು’ ಈ ಗ್ರಂಥದಲ್ಲಿ ಕೊಡಲಾಗಿದೆ.)

ಗಣೇಶ ಚತುರ್ಥಿಯಂದು ನೂತನ ಶ್ರೀ ಗಣೇಶ ಮೂರ್ತಿಯನ್ನು ತರುವ ಹಿಂದಿನ ಉದ್ದೇಶವೇನು?

ಮನೆಯಲ್ಲಿ ಪೂಜೆಗಾಗಿ ಗಣಪತಿಯನ್ನು ಇಟ್ಟಿರುವಾಗಲೂ ನೂತನ ಮೂರ್ತಿಯನ್ನು ತರುವ ಉದ್ದೇಶವು ಮುಂದಿನಂತಿದೆ. ಗಣೇಶ ಚತುರ್ಥಿಯ ಸಮಯದಲ್ಲಿ ಗಣೇಶ ಲಹರಿಗಳು ಅತಿ ಹೆಚ್ಚಿನ ಪ್ರಮಾಣದಲ್ಲಿ ಪೃಥ್ವಿಯ ಮೇಲೆ ಬರುತ್ತವೆ. ನಿತ್ಯದ ಪೂಜೆಯಲ್ಲಿರುವ ಮೂರ್ತಿಯಲ್ಲಿ ಅವುಗಳ ಆವಾಹನೆ ಮಾಡಿದರೆ ಅದರಲ್ಲಿ ಬಹಳಷ್ಟು ಶಕ್ತಿ ಬರಬಹುದು. ಇಂತಹ ಹೆಚ್ಚು ಶಕ್ತಿ ಇರುವ ಮೂರ್ತಿಯ ಎಲ್ಲ ಬಗೆಯ ಪೂಜೆ-ಅರ್ಚನೆಗಳನ್ನು ವರ್ಷಪೂರ್ತಿ ಸರಿಯಾಗಿ ಮಾಡುವುದು ಕಠಿಣವಾಗಿರುತ್ತದೆ; ಏಕೆಂದರೆ ಅದಕ್ಕೆ ಕರ್ಮಕಾಂಡದ ಬಹಳಷ್ಟು ಬಂಧನಗಳನ್ನು ಪಾಲಿಸಬೇಕಾಗುತ್ತದೆ. ಈ ಕಾರಣಕ್ಕಾಗಿಯೇ ಗಣೇಶ ಲಹರಿಗಳನ್ನು ಆವಾಹನೆ ಮಾಡಲು ನೂತನ ಮೂರ್ತಿಯನ್ನು ಉಪಯೋಗಿಸಿ ನಂತರ ಅದನ್ನು ವಿಸರ್ಜನೆ ಮಾಡುತ್ತಾರೆ. ಗಣೇಶ ಲಹರಿಗಳಲ್ಲಿನ ಸತ್ತ್ವ, ರಜ ಮತ್ತು ತಮದ ಪ್ರಮಾಣವು ೫:೫:೫ ಹೀಗಿದ್ದರೆ ಸರ್ವಸಾಧಾರಣ ವ್ಯಕ್ತಿಯಲ್ಲಿ ಅದರ ಪ್ರಮಾಣವು ೧:೩:೫ ಹೀಗೆ ಇರುತ್ತದೆ; ಆದ್ದರಿಂದ ಸರ್ವಸಾಧಾರಣ ವ್ಯಕ್ತಿಯು ಗಣೇಶ ಲಹರಿಗಳನ್ನು ಹೆಚ್ಚು ಸಮಯದ ವರೆಗೆ ಗ್ರಹಣ ಮಾಡಲಾರನು.

(ಗಣಪತಿಯ ಮೂರ್ತಿಯನ್ನು ಅಧ್ಯಾತ್ಮಶಾಸ್ತ್ರಕ್ಕನುಸಾರವಾಗಿ ತಯಾರಿಸಿದರೆ ಅದರಲ್ಲಿ ಗಣೇಶತತ್ತ್ವವು ಹೆಚ್ಚಿನ ಪ್ರಮಾಣದಲ್ಲಿ ಆಕರ್ಷಿಸಲ್ಪಡುತ್ತದೆ. ಗಣೇಶ ಚತುರ್ಥಿಯಂದು ಪೂಜಿಸಬೇಕಾದ ಗಣಪತಿಯ ಮೂರ್ತಿಯನ್ನು ಅಧ್ಯಾತ್ಮಶಾಸ್ತ್ರದಂತೆ ಹೇಗೆ ತಯಾರಿಸಬೇಕು ಎಂಬುದರ ಮಾಹಿತಿಯನ್ನು ಇಲ್ಲಿ ಓದಿ.)

ಶಾಸ್ತ್ರೋಕ್ತ ವಿಧಿ ಮತ್ತು ರೂಢಿ ಇವುಗಳ ಅವಧಿ

‘ಭಾದ್ರಪದ ಶುಕ್ಲ ಚತುರ್ಥಿಯ ದಿನ ಮಣ್ಣಿನ ಗಣಪತಿಯನ್ನು ತಯಾರಿಸಿ, ಅದನ್ನು ಎಡಗೈ ಮೇಲಿಟ್ಟು ಅಲ್ಲಿಯೇ ಸಿದ್ಧಿವಿನಾಯಕ ಹೆಸರಿನಿಂದ ಪ್ರಾಣಪ್ರತಿಷ್ಠೆ ಮತ್ತು ಪೂಜೆಯನ್ನು ಮಾಡಿ ಕೂಡಲೇ ವಿಸರ್ಜನೆ ಮಾಡಬೇಕು ಎಂಬ ಶಾಸ್ತ್ರವಿದೆ. ಆದರೆ ಮಾನವರು ಉತ್ಸವಪ್ರಿಯರಾಗಿರುವುದರಿಂದ ಇಷ್ಟರಿಂದಲೇ ಅವರಿಗೆ ಸಮಾಧಾನವಾಗಲಿಲ್ಲ. ಆದುದರಿಂದ ಒಂದೂವರೆ, ಐದು, ಏಳು ಅಥವಾ ಹತ್ತು ದಿನ ಗಣಪತಿಯ ಮೂರ್ತಿಯನ್ನು ಇಟ್ಟು ಉತ್ಸವ ಮಾಡತೊಡಗಿದರು. ಕೆಲವರು ಗಣಪತಿಯ ವಿಸರ್ಜನೆಯನ್ನು ಗೌರಿಯ ಜೊತೆಗೆ ಮಾಡುತ್ತಾರೆ. ಯಾರಾದರೊಬ್ಬರ ಕುಲದಲ್ಲಿ ಗಣಪತಿಯನ್ನು ಐದು ದಿನ ಇಡುವ ಪದ್ಧತಿ ಇದ್ದು ಅವರು ಅದನ್ನು ಒಂದೂವರೆ ಅಥವಾ ಏಳು ದಿನ ಇಡಬೇಕಾಗಿದ್ದರೆ ಅವರು ಹಾಗೆ ಮಾಡಬಹುದು. ಇದಕ್ಕೆ ಯಾವುದೇ ಅಧಿಕಾರಯುತ ವ್ಯಕ್ತಿಯನ್ನು ಕೇಳುವ ಆವಶ್ಯಕತೆಯಿಲ್ಲ. ತಮ್ಮ ತಮ್ಮ ರೂಢಿಗನುಸಾರ ಮೊದಲನೆಯ, ಎರಡನೆಯ, ಮೂರನೆಯ, ಆರನೆಯ, ಏಳನೆಯ ಅಥವಾ ಹತ್ತನೆಯ ದಿನ ಗಣೇಶಮೂರ್ತಿಯ ವಿಸರ್ಜನೆಯನ್ನು ಮಾಡಬೇಕು.

ಮೂರ್ತಿಯು ಭಗ್ನವಾದರೆ ಏನು ಮಾಡಬೇಕು?

ಮೂರ್ತಿಯ ಪ್ರಾಣಪ್ರತಿಷ್ಠೆಯನ್ನು ಮಾಡುವುದಕ್ಕಿಂತ ಮೊದಲು ಯಾವುದಾದರೊಂದು ಅವಯವಕ್ಕೆ ಏಟಾದರೆ ಅಥವಾ ಭಿನ್ನವಾದರೆ ಚಿಂತಿಸುವ ಕಾರಣವಿಲ್ಲ, ಅದರ ಬದಲು ಬೇರೆ ಮೂರ್ತಿಯನ್ನು ತಂದು ಪೂಜಿಸಬೇಕು. ವಿಸರ್ಜನೆಗಾಗಿ ಅಕ್ಷತೆ ಹಾಕಿದ ನಂತರ (ದೈವತ್ತ್ವವು ಹೋದ ನಂತರ) ಅವಯವಗಳಿಗೆ ಏಟಾದರೆ ಅಥವಾ ಭಿನ್ನವಾದರೆ ಆ ಮೂರ್ತಿಯನ್ನು ನಿತ್ಯದಂತೆ ವಿಸರ್ಜನೆ ಮಾಡಬೇಕು. ಪ್ರಾಣ ಪ್ರತಿಷ್ಠೆಯಾದ ನಂತರ ಅವಯವಕ್ಕೆ ಏಟಾದರೆ ಅಥವಾ ಮುರಿದರೆ ಆ ಮೂರ್ತಿಗೆ ಅಕ್ಷತೆಯನ್ನು ಅರ್ಪಿಸಿ ವಿಸರ್ಜಿಸಬೇಕು. ಈ ಘಟನೆಯು ಗಣೇಶ ಚತುರ್ಥಿಯ ದಿನವೇ ನಡೆದರೆ ಬೇರೆ ಮೂರ್ತಿಯನ್ನು ತಂದು ಪೂಜಿಸಬೇಕು. ಎರಡನೆಯ ಅಥವಾ ಮೂರನೆಯ ದಿನ ನಡೆದರೆ ಹೊಸ ಮೂರ್ತಿಯನ್ನು ತಂದು ಪೂಜಿಸಬೇಕಾಗಿಲ್ಲ. ಮೂರ್ತಿಯು ಸಂಪೂರ್ಣ ಭಗ್ನವಾದರೆ ಕುಲಪುರೋಹಿತರ ಸಲಹೆಯಂತೆ ಯಥಾವಕಾಶ ‘ಅದ್ಭುತ ದರ್ಶನ ಶಾಂತಿ’ಯನ್ನು ಮಾಡಿಸಬೇಕು. ಗಣೇಶ ಚತುರ್ಥಿಯಂದು ದೀಪಪತನ (ದೀಪ ಆರಿ ಹೋಗುವುದು), ಅರೆಯುವ ಕಲ್ಲು, ಬೀಸುವ ಕಲ್ಲು ಅಥವಾ ಸಾಣೆಕಲ್ಲು ಒಡೆದು ಹೋಗುವುದು, ಕೆಸುವಿನ ಎಲೆಗೆ ಹೂವು ಬರುವುದು, ಮೂರ್ತಿಭಗ್ನ ಇತ್ಯಾದಿ ಘಟನೆಗಳಾದರೆ ಆ ಕುಟುಂಬದಲ್ಲಿ ದ್ರವ್ಯ ಹಾನಿ, ಗಂಭೀರ ರೋಗ ಅಥವಾ ಅಪಮೃತ್ಯು ಆಗುವ ಸಾಧ್ಯತೆಯಿರುತ್ತದೆ; ಅದಕ್ಕಾಗಿ ಮೇಲೆ ಕೊಟ್ಟಿರುವ ಪರಿಹಾರಗಳನ್ನು ಶ್ರದ್ಧೆಯಿಂದ ಮಾಡಬೇಕು.

ಚಂದ್ರ, ಮನಸ್ಸು ಮತ್ತು ಗಣೇಶ ಚತುರ್ಥಿ ಇವುಗಳ ಸಂಬಂಧ

೧. ಸೌರಮಂಡಲದಲ್ಲಿನ ಎಲ್ಲ ಗ್ರಹಗಳಲ್ಲಿ ಚಂದ್ರಗ್ರಹವು ಅತ್ಯಂತ ಚಂಚಲವಾಗಿದೆ. ಆದುದರಿಂದ ಚಂಚಲ ಸ್ವಭಾವವಿರುವವರ ಮನಸ್ಸಿನ ಮೇಲೆ ಚಂದ್ರನ ಸ್ಪಂದನಗಳು ಹೆಚ್ಚು ಕಾರ್ಯ ಮಾಡುತ್ತವೆ.
೨. ಪೃಥ್ವಿಯಿಂದ ಚಂದ್ರಗ್ರಹದ ದರ್ಶನವನ್ನು ನಾವು ಸಹಜವಾಗಿ ಪಡೆದುಕೊಳ್ಳಬಹುದು ಮತ್ತು ಅದನ್ನು ನಾವು ಮನಸ್ಸಿನಲ್ಲಿ ಅತ್ಯಂತ ಸಹಜವಾಗಿ ಯಾವಾಗ ಬೇಕಾದರೂ ನೋಡಬಹುದು.
೩. ಪರಿಣಾಮ: ಗಣೇಶ ಚತುರ್ಥಿಯ ದಿನ ಬ್ರಹ್ಮಾಂಡದಲ್ಲಿ ನಿರ್ಮಾಣವಾಗುವ ರಜೋಗುಣದ ಸ್ಪಂದನಗಳು ಚಂದ್ರನ ಕಡೆಗೆ ಹೆಚ್ಚಿನ ಪ್ರಮಾಣದಲ್ಲಿ ಆಕರ್ಷಿತವಾಗಿ ಚಂಚಲ ಮನಸ್ಸಿರುವ ಮನುಷ್ಯರ ಕಡೆಗೆ ಆಕರ್ಷಿಸಲ್ಪಡುತ್ತವೆ.

ಗಣೇಶ ಚತುರ್ಥಿಯ ವೈಶಿಷ್ಟ್ಯಗಳು

ಈ ದಿನ ರಜೋಗುಣದಿಂದಾಗಿ ಚಂದ್ರನ ಸುತ್ತಲಿರುವ ಪ್ರಭಾವಲಯವು ಬಹಳ ತೇಜಸ್ವಿಯಾಗಿ ಕಾಣಿಸುತ್ತದೆ ಮತ್ತು ಅದು ಚಂಚಲ ಮನಸ್ಸನ್ನು ಸಹಜವಾಗಿ ಆಕರ್ಷಿಸಿಕೊಳ್ಳುತ್ತದೆ. ಈ ದಿನ ಚಂದ್ರದರ್ಶನವನ್ನು ಪಡೆದುಕೊಂಡರೆ, ಚಂದ್ರನು ತನ್ನ ಪ್ರಚಂಡ ರಜೋಗುಣದೊಂದಿಗೆ ಮನಸ್ಸಿನಲ್ಲಿ ಬೇರೂರುತ್ತಾನೆ. ಮನಸ್ಸಿನ ಮೇಲೆ ಮೂಡುವ ಅವನ ಚಿತ್ರವೂ ಅಷ್ಟೇ ಚಂಚಲವಾಗಿರುತ್ತದೆ. ಆದುದರಿಂದ ಅದು ಯಾವ ಕಾರಣಗಳು ಇಲ್ಲದಿರುವಾಗಲೂ ಮತ್ತು ಯಾವುದೇ ಸಮಯದಲ್ಲಿ ಮನಸ್ಸಿನ ಮೇಲೆ ಮೂಡುತ್ತದೆ. ಚಂದ್ರನನ್ನು ನೋಡಿದ ಸಮಯದಲ್ಲಿನ ದೃಶ್ಯವನ್ನು ನೆನಪಿಸಿಕೊಂಡರೂ ಮನಸ್ಸು ಚಂಚಲವಾಗುತ್ತದೆ.

ಗಣೇಶ ಚತುರ್ಥಿಯ ದಿನ ಚಂದ್ರನ ದರ್ಶನವನ್ನು ಪಡೆದುಕೊಳ್ಳದಿರುವುದು

ಮನಸ್ಸಿನ ಚಂಚಲತೆಯು ಸುಮಾರು ಒಂದು ವರ್ಷದವರೆಗೆ ಉಳಿಯುತ್ತದೆ. ಮನಸ್ಸಿನ ಚಂಚಲತೆಯ ಪ್ರಚಂಡ ಪ್ರಭಾವದಿಂದಾಗಿ ಯಾವುದಾದರೊಂದು ಘಟನೆಯು ಘಟಿಸುವ ಮೊದಲೇ ಅದು ಘಟಿಸಿ ಹೋಗಿದೆ ಎಂಬ ತಪ್ಪುತಿಳುವಳಿಕೆ ಅಥವಾ ಗಾಳಿ ಸುದ್ದಿ ಹರಡುವ ಸಾಧ್ಯತೆ ಇರುತ್ತದೆ. ಇದನ್ನೇ ಯಾವುದಾದರೊಂದು ಅಡಚಣೆಯನ್ನು ಮೈಮೇಲೆ ಎಳೆದುಕೊಳ್ಳುವುದು ಎಂದು ಹೇಳುತ್ತಾರೆ. ಈ ಕಾರಣಕ್ಕಾಗಿ ಗಣೇಶ ಚತುರ್ಥಿಯ ದಿನ ಚಂದ್ರನನ್ನು ನೋಡುವುದು ಅಶುಭವೆಂದು ತಿಳಿದುಕೊಳ್ಳುತ್ತಾರೆ.

ಜ್ಯೋತಿಷ್ಯ ಮತ್ತು ಚಂದ್ರದರ್ಶನ

ಗಣೇಶ ಚತುರ್ಥಿಯ ದಿನದಂದು ಯಾವ ವ್ಯಕ್ತಿಯ ರಾಶಿಯಲ್ಲಿ ಯಾವುದೇ ಸ್ಥಾನದಲ್ಲಿ ಚಂದ್ರನಿದ್ದರೆ ಅವನು ಚಂದ್ರದರ್ಶನವನ್ನು ಮಾಡಲೇಬಾರದು. ಇಂತಹ ವ್ಯಕ್ತಿಯು ನೀರಿನಲ್ಲಿ ಕಾಣಿಸುವ ಚಂದ್ರನ ಪ್ರತಿಬಿಂಬವನ್ನು ಸಹ ನೋಡಬಾರದು. ಏಕೆಂದರೆ ನೀರಿನಿಂದ ನೆನೆದಿರುವ ಮಣ್ಣಿನಲ್ಲಿಯೂ ಪ್ರಜನನ ಶಕ್ತಿಯು ಹೆಚ್ಚಾಗಿರುವುದರಿಂದ ಅಲ್ಲಿಯೂ ಪ್ರಚಂಡ ಪ್ರಮಾಣದಲ್ಲಿ ರಜೋಗುಣವು ನಿರ್ಮಾಣವಾಗಿರುತ್ತದೆ.

ಶ್ರೀ ಗಣೇಶ ಚತುರ್ಥಿಯಂದು ಬಿಡಿಸಬೇಕಾದ  ಗಣೇಶತತ್ತ್ವವನ್ನು ಆಕರ್ಷಿಸುವ ರಂಗೋಲಿಗಳು


ಗಣೇಶೋತ್ಸವದ ಸಮಯದಲ್ಲಿ ಮಾಡಬೇಕಾದ ಪ್ರಾರ್ಥನೆ

ಹೇ ಶ್ರೀ ಗಣೇಶಾ, ಗಣೇಶೋತ್ಸವದ ಸಮಯದಲ್ಲಿ ಎಂದಿಗಿಂತ ಸಾವಿರ ಪಟ್ಟು ಹೆಚ್ಚು ಕಾರ್ಯನಿರತವಾಗಿರುವ ನಿನ್ನ ತತ್ತ್ವದ ಲಾಭವು ನನಗೆ ಹೆಚ್ಚಿನ ಪ್ರಮಾಣದಲ್ಲಿ ಗ್ರಹಿಸುವಂತಾಗಲಿ. (ಪ್ರಾರ್ಥನೆಯ ಬಗ್ಗೆ ಸವಿಸ್ತಾರವಾದ ವಿವೇಚನೆ ಮತ್ತು ಜೀವನದಲ್ಲಿನ ವಿವಿಧ ಪ್ರಸಂಗಗಳಲ್ಲಿ ಮಾಡಬೇಕಾದ ಪ್ರಾರ್ಥನೆಗಳನ್ನು ಸನಾತನದ ‘ಪ್ರಾರ್ಥನೆ (ಮಹತ್ವ ಮತ್ತು ಉದಾಹರಣೆಗಳು)’ ಈ ಕಿರುಗ್ರಂಥದಲ್ಲಿ ನೀಡಲಾಗಿದೆ.)

(ಹೆಚ್ಚಿನ ಮಾಹಿತಿಗಾಗಿ ಸನಾತನ ಸಂಸ್ಥೆಯು ಪ್ರಕಾಶಿಸಿದ ‘ಗಣಪತಿ’ ಎಂಬ ಗ್ರಂಥವನ್ನು ಓದಿರಿ.)

ಶ್ರೀ ಗಣೇಶನಿಗೆ ಸಂಬಂಧಿತ ಮಾಹಿತಿಗಳು
ಶಾಸ್ತ್ರಕ್ಕನುಸಾರ ತಯಾರಿಸಿದ ಮೂರ್ತಿಯು ಏಕೆ ಸಾತ್ತ್ವಿಕವಾಗಿರುತ್ತದೆ?
ಮಣ್ಣಿನ ಗಣೇಶ ಮೂರ್ತಿಯನ್ನೇ ಪೂಜಿಸಿ!
ಶಾಸ್ತ್ರೀಯ ಗಣೇಶಮೂರ್ತಿಯನ್ನೇ ಪೂಜಿಸಿ!
ಶ್ರೀ ಗಣೇಶನ ಮೂರ್ತಿಯನ್ನು ಮನೆಗೆ ಹೇಗೆ ತರಬೇಕು?
ಗಣೇಶ ಚತುರ್ಥಿಯ ಲಾಭ ಹೀಗೆ ಪಡೆಯಿರಿ!
ಗಣೇಶ ಚತುರ್ಥಿಯಂದು ಮಾಡಬೇಕಾದ ಕೃತಿಗಳು
ಯುಗಗಳಿಗನುಸಾರ ಶ್ರೀ ಗಣೇಶನ ಅವತಾರಗಳು
ಗಣೇಶಮೂರ್ತಿಯನ್ನು ಯೋಗ್ಯ ಪದ್ಧತಿಯಲ್ಲಿ ವಿಸರ್ಜನೆ ಮಾಡಿ! 
ಬಲಮುರಿ ಮತ್ತು ಎಡಮುರಿ ಗಣಪತಿಯ ವಿಶೇಷತೆ
ಶ್ರೀ ಗಣೇಶ : ಚತುರ್ಥಿ ಮಹತ್ವ
ಗಣೇಶ ಜಯಂತಿ
ಶ್ರೀ ಗಣೇಶ ಪೂಜಾವಿಧಿ

ಇತರ ಧಾರ್ಮಿಕ ವಿಷಯಗಳು
ವ್ರತಗಳು
ವ್ರತಗಳ ವಿಧಗಳು 

ಬೇವಿನ ಪ್ರಸಾದ


ಮಹತ್ವ: ಬೇವಿನಲ್ಲಿ ಪ್ರಜಾಪತಿ-ಲಹರಿಗಳನ್ನು ಗ್ರಹಿಸುವ ಕ್ಷಮತೆಯು ಇತರ ಯಾವುದೇ ಪದಾರ್ಥಕ್ಕಿಂತಲೂ ಹೆಚ್ಚಿರುವುದರಿಂದ ಯುಗಾದಿಯ ದಿನ ಬೇವಿನ ಪ್ರಸಾದವನ್ನು ಸೇವಿಸುತ್ತಾರೆ. ಮುಂದಿನ ಕೋಷ್ಟಕದಲ್ಲಿ ಲಹರಿಗಳನ್ನು ಗ್ರಹಿಸುವ ಕೆಲವು ಪದಾರ್ಥಗಳ ಕ್ಷಮತೆಯನ್ನು ನೀಡಲಾಗಿದೆ. ಇದರಿಂದ ಯುಗಾದಿಯಂದು ಬೇವನ್ನು ಏಕೆ ತಿನ್ನುತ್ತಾರೆ ಮತ್ತು ಚೈತ್ರ ಮಾಸದಲ್ಲಿ ಹಾಲು, ಮೊಸರು, ತುಪ್ಪ ಮತ್ತು ಸಕ್ಕರೆಯನ್ನು ಏಕೆ ತಿನ್ನಬಾರದೆಂಬುದು ಗಮನಕ್ಕೆ ಬರುತ್ತದೆ.

(ಸಂಕಲನಕಾರ ಪ.ಪೂ.ಡಾ.ಜಯಂತ ಆಠವಲೆ ಇವರಿಗೆ ಧ್ಯಾನದಲ್ಲಿ ಪ್ರಾಪ್ತವಾದ ಜ್ಞಾನ)

ಬೇವಿನ ಪ್ರಸಾದವನ್ನು ತಯಾರಿಸುವ ಪದ್ಧತಿ: ಬೇವಿನ ಹೂವು, ಬೇವಿನ ಚಿಗುರೆಲೆ, ನೆನೆಸಿದ ಕಡಲೆಕಾಳು ಅಥವಾ ಕಡಲೆಬೇಳೆ, ಜೇನು, ಜೀರಿಗೆ ಮತ್ತು ಸ್ವಲ್ಪ ಹಿಂಗು ಇವೆಲ್ಲವನ್ನು ಬೆರೆಸಿ ಪ್ರಸಾದವನ್ನು ತಯಾರಿಸಬೇಕು ಮತ್ತು ಎಲ್ಲರಿಗೂ ಕೊಡಬೇಕು.

(ಹೆಚ್ಚಿನ ಮಾಹಿತಿಗಾಗಿ ಓದಿ - ಸನಾತನ ಸಂಸ್ಥೆಯ ಗ್ರಂಥ 'ಹಬ್ಬ, ಧಾರ್ಮಿಕ ಉತ್ಸವ ಮತ್ತು ವ್ರತಗಳು')

ಶ್ರೀರಾಮನವಮಿ


ತಿಥಿ
ಚೈತ್ರ ಶುಕ್ಲ ನವಮಿ

ಇತಿಹಾಸ
ಶ್ರೀವಿಷ್ಣುವಿನ ಏಳನೆಯ ಅವತಾರನಾದ ಶ್ರೀರಾಮನ ಜನ್ಮ ಪ್ರೀತ್ಯರ್ಥವಾಗಿ ಶ್ರೀರಾಮ ನವಮಿಯನ್ನು ಆಚರಿಸುತ್ತಾರೆ. ಈ ದಿನ ಪುಷ್ಯ ನಕ್ಷತ್ರದಲ್ಲಿ, ಮಧ್ಯಾಹ್ನದಲ್ಲಿ, ಕರ್ಕ ಲಗ್ನದಲ್ಲಿ ಸೂರ್ಯಾದಿ ಐದು ಗ್ರಹಗಳಿದ್ದಾಗ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಜನ್ಮವಾಯಿತು.

ಮಹತ್ವ
ದೇವತೆಗಳು ಮತ್ತು ಅವತಾರಗಳ ಜನ್ಮತಿಥಿಯಂದು ಭೂಮಿಯ ಮೇಲೆ ಅವರ ತತ್ತ್ವವು ಹೆಚ್ಚು ಪ್ರಮಾಣದಲ್ಲಿ ಕಾರ್ಯನಿರತವಾಗಿರುತ್ತದೆ. ಶ್ರೀರಾಮ ನವಮಿಗೆ ಶ್ರೀರಾಮತತ್ತ್ವವು ಎಂದಿಗಿಂತ ೧೦೦೦ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ಶ್ರೀರಾಮ ನವಮಿಗೆ ‘ಶ್ರೀರಾಮ ಜಯ ರಾಮ ಜಯ ಜಯ ರಾಮ|’ ನಾಮಜಪ, ಹಾಗೆಯೇ ಶ್ರೀರಾಮನ ಇತರ ಉಪಾಸನೆಗಳನ್ನು ಭಾವಪೂರ್ಣವಾಗಿ ಮಾಡುವುದರಿಂದ ಶ್ರೀರಾಮತತ್ತ್ವದ ಲಾಭವನ್ನು ಆದಷ್ಟು ಹೆಚ್ಚು ಪಡೆಯಲು ಸಹಾಯವಾಗುತ್ತದೆ.

ಉತ್ಸವವನ್ನು ಆಚರಿಸುವ ಪದ್ಧತಿ
ಅನೇಕ ರಾಮ ಮಂದಿರಗಳಲ್ಲಿ ಚೈತ್ರ ಶುಕ್ಲ ಪ್ರತಿಪದೆಯಿಂದ ಒಂಭತ್ತು ದಿನಗಳ ಕಾಲ ಈ ಉತ್ಸವವು ನಡೆಯುತ್ತದೆ. ರಾಮಾಯಣದ ಪಾರಾಯಣ, ಹರಿಕಥೆ ಮತ್ತು ರಾಮನ ಮೂರ್ತಿಗೆ ವಿವಿಧ ಶೃಂಗಾರ ಮುಂತಾದವುಗಳೊಂದಿಗೆ ಈ ಉತ್ಸವವನ್ನು ಆಚರಿಸುತ್ತಾರೆ. ನವಮಿಯಂದು ಮಧ್ಯಾಹ್ನ ರಾಮಜನ್ಮದ ಕೀರ್ತನೆ (ಹರಿಕಥೆ) ಯಾಗುತ್ತದೆ. ಮಧ್ಯಾಹ್ನ ಕುಂಚಿಗೆ (ಮಗುವಿನ ತಲೆಗೆ ಕಟ್ಟುವ ಒಂದು ವಸ್ತ್ರ. ಈ ವಸ್ತ್ರವು ಬೆನ್ನಿನವರೆಗೆ ಇರುತ್ತದೆ.) ಹಾಕಿದ ತೆಂಗಿನಕಾಯಿಯನ್ನು ತೊಟ್ಟಿಲಿನಲ್ಲಿಟ್ಟು ತೂಗುತ್ತಾರೆ. ಭಕ್ತರು ಅದರ ಮೇಲೆ, ಗುಲಾಲು ಮತ್ತು ಹೂವುಗಳನ್ನು ಅರ್ಪಿಸುತ್ತಾರೆ.’ (ಕೆಲವು ಕಡೆಗಳಲ್ಲಿ ತೆಂಗಿನ ಕಾಯಿಯ ಬದಲು ಶ್ರೀರಾಮನ ಮೂರ್ತಿಯನ್ನು ತೊಟ್ಟಿಲಿನಲ್ಲಿ ಇಡುತ್ತಾರೆ. - ಸಂಕಲನಕಾರರು) ಈ ಸಂದರ್ಭದಲ್ಲಿ ಶ್ರೀರಾಮನ ಜನ್ಮದ ಗೀತೆಯನ್ನು ಹೇಳಲಾಗುತ್ತದೆ. ಅದರ ನಂತರ ಶ್ರೀರಾಮನ ಮೂರ್ತಿಯನ್ನು ಪೂಜಿಸುತ್ತಾರೆ ಮತ್ತು ಪ್ರಸಾದವೆಂದು ಶುಂಠಿಚೂರ್ಣವನ್ನು ಕೊಡುತ್ತಾರೆ. ಕೆಲವು ಕಡೆಗಳಲ್ಲಿ ಶುಂಠಿಚೂರ್ಣದೊಂದಿಗೆ ಮಹಾಪ್ರಸಾದವನ್ನೂ ನೀಡುತ್ತಾರೆ.

ರಾಮನವಮಿಯ ಮಹತ್ವ
ತ್ರೇತಾಯುಗದಲ್ಲಿ ರಾಮನ ಜನ್ಮವಾದಾಗ ಕಾರ್ಯನಿರತವಾಗಿದ್ದ ಶ್ರೀವಿಷ್ಣುವಿನ ಸಂಕಲ್ಪ, ತ್ರೇತಾಯುಗದಲ್ಲಿನ ಅಯೋಧ್ಯಾವಾಸಿಗಳ ಭಕ್ತಿ ಭಾವ ಮತ್ತು ಪೃಥ್ವಿಯಲ್ಲಿನ ಸಾತ್ತ್ವಿಕ ವಾತಾವರಣದಿಂದಾಗಿ ಪ್ರಭು ಶ್ರೀರಾಮನ ಜನ್ಮದಿಂದ ಶೇ. ೧೦೦ ರಷ್ಟು ಪರಿಣಾಮವಾಗಿತ್ತು. ಅನಂತರ ಪ್ರತಿವರ್ಷ ಬರುವಂತಹ ಚೈತ್ರ ಶುಕ್ಲ ನವಮಿಗೆ ಬ್ರಹ್ಮಾಂಡದಲ್ಲಿನ ವಾತಾವರಣದಲ್ಲಿ ರಾಮತತ್ತ್ವವು ಪ್ರಕ್ಷೇಪಿಸಿ ವಾತಾವರಣವನ್ನು ಸಾತ್ತ್ವಿಕ ಮತ್ತು ಚೈತನ್ಯಮಯವನ್ನಾಗಿಸಲು ವಿಷ್ಣುಲೋಕದಿಂದ ಶ್ರೀರಾಮತತ್ತ್ವಯುಕ್ತ ವಿಷ್ಣುತತ್ತ್ವವು ಭೂಲೋಕದ ದಿಕ್ಕಿನತ್ತ ಪ್ರಕ್ಷೇಪಿತವಾಗುತ್ತದೆ ಮತ್ತು ಆ ದಿನ ಶ್ರೀರಾಮನ ಅಂಶಾತ್ಮಕ ಜನ್ಮವಾಗುತ್ತದೆ. ಇದರ ಪರಿಣಾಮ ಇಡೀ ವರ್ಷವಿದ್ದು ಬ್ರಹ್ಮಾಂಡದಲ್ಲಿ ರಾಮ ತತ್ತ್ವಯುಕ್ತ ಸಾತ್ತ್ವಿಕತೆ ಮತ್ತು ಚೈತನ್ಯದ ಪ್ರಕ್ಷೇಪಣೆಯಾಗುತ್ತದೆ. ರಾಮ ತತ್ತ್ವಯುಕ್ತ ಸಾತ್ತ್ವಿಕತೆ ಮತ್ತು ಚೈತನ್ಯವನ್ನು ಬ್ರಹ್ಮಾಂಡದಲ್ಲಿನ ಪ್ರತಿಯೊಂದು ಸಜೀವ ಮತ್ತು ನಿರ್ಜೀವ ವಸ್ತುಗಳು ಗ್ರಹಿಸಿಕೊಳ್ಳುತ್ತವೆ ಮತ್ತು ಅದರಿಂದ ಅವುಗಳಿಗೆ ತಮ್ಮ ಕಾರ್ಯವನ್ನು ಒಳ್ಳೆಯ ರೀತಿಯಿಂದ ಮಾಡಲು ಸಾಧ್ಯವಾಗುತ್ತದೆ.

ರಾಮಭಕ್ತರ ಮಹತ್ವ
ಶ್ರೀರಾಮನಂತೂ ಶ್ರೇಷ್ಠ ಮತ್ತು ಪೂಜನೀಯನಾಗಿದ್ದನು, ಅಲ್ಲದೆ ಅವನ ಭಕ್ತರೂ ಅಷ್ಟೇ ವಂದನೀಯರಾಗಿದ್ದರು. ಕಲಿಯುಗದಲ್ಲಿ ಶ್ರೀರಾಮನು ಪುನಃ ಅವತಾರ ತಾಳಬಹುದು. ಆದರೆ ಶ್ರೀರಾಮನ ಸೀಮಾತೀತ ಭಕ್ತಿಯನ್ನು ಮಾಡುವಂತಹ ಉಚ್ಚ ಮಟ್ಟದ ಭಕ್ತರು ಸಿಗುವುದು ಕಠಿಣವಾಗಿದೆ. ಸಾಧಕರು ಶ್ರೀರಾಮನ ಭಕ್ತರ ಗುಣಗಳನ್ನು ಅಂಗೀಕರಿಸಿ ಅದಕ್ಕನುಸಾರ ಸಾಧನೆ ಮಾಡಿದರೆ ಅವರ ಮೇಲೆ ಗುರುರೂಪೀ ಶ್ರೀರಾಮನ ಕೃಪೆಯಾಗಿ ಅವರಿಗೆ ಅಂತರ್ಬಾಹ್ಯ ಕ್ಷಾತ್ರಧರ್ಮ ಹೋರಾಟವನ್ನು ಯಶಸ್ವಿಯಾಗಿ ನಡೆಸಲು ಆಗುವುದು ಮತ್ತು ಅವರಲ್ಲಿ ಅಂತರ್ಬಾಹ್ಯ ರಾಮರಾಜ್ಯವು ಖಂಡಿತವಾಗಿಯೂ ಸ್ಥಾಪನೆಯಾಗುವುದು. - ಈಶ್ವರ (ಕು.ಮಧುರಾ ಭೋಸಲೆಯವರ ಮಾಧ್ಯಮದಿಂದ, ೬.೪.೨೦೦೫, ರಾತ್ರಿ ೯.೦೩ ರಿಂದ ೯.೨೦)

ರಾಮಾಯಣದ ಉತ್ಪತ್ತಿ
ಉತ್ಪತ್ತಿ ಮತ್ತು ಅರ್ಥ:
ರಾಮಾಯಣ ಶಬ್ದವು ರಂ + ಅಯನ ಈ ಎರಡು ಶಬ್ದಗಳಿಂದ ನಿರ್ಮಾಣವಾಗಿದೆ. ರಮ್ ರಮಯತೇ ಎಂದರೆ ತಲ್ಲೀನರಾಗುವುದು, ‘ಸಾಧನೆಯಲ್ಲಿ ತಲ್ಲೀನರಾಗುವುದು’. ಅಯನ ಎಂದರೆ ಸಪ್ತಲೋಕಗಳು. ಸಾಧನೆಯಲ್ಲಿ ತಲ್ಲೀನರಾಗಿ ಆನಂದದಲ್ಲಿದ್ದು, ಸಪ್ತಲೋಕ ಗಳನ್ನು ದಾಟಿ ಮೋಕ್ಷಕ್ಕೆ ಹೋಗುವುದನ್ನು ರಾಮಾಯಣದಲ್ಲಿ ಹೇಳಲಾಗಿದೆ. ‘ಸಮಸ್ತ ಅಯನಂ ರಾಮಾಯಣಮ್|’ ಅಯನ ಎಂದರೆ ಹೋಗುವುದು, ಮಾರ್ಗ ಇತ್ಯಾದಿ ಅರ್ಥವಾಗುತ್ತದೆ. ಪರಬ್ರಹ್ಮ ಪರಮಾತ್ಮಸ್ವರೂಪನಾದ ಶ್ರೀರಾಮನ ಕಡೆಗೆ ಕೊಂಡೊಯ್ಯುವ, ಅದರತ್ತ ಹೋಗಲು ಚಾಲನೆ ನೀಡುವ ಅಥವಾ ಸ್ಫೂರ್ತಿ, ಉತ್ಸಾಹ ನೀಡುವ, ಜೀವನದ ನಿಜವಾದ ಮಾರ್ಗವನ್ನು ತೋರಿಸುವುದೆಂದರೆ ‘ರಾಮಾಯಣ’ವಾಗಿದೆ.

ರಾಮತತ್ತ್ವವನ್ನು ಆಕರ್ಷಿಸುವ ಮತ್ತು ಪ್ರಕ್ಷೇಪಿಸುವ ರಂಗೋಲಿ


ರಾಮಾಯಣದಲ್ಲಿನ ಕೆಲವು ವಿಶೇಷ ಪ್ರಸಂಗಗಳು
ಶ್ರೀರಾಮನಲ್ಲಿ ವಿರಾಟನ ಸಾಮರ್ಥ್ಯವಿತ್ತು!
ಶೂರ್ಪಣಖಿಯು ಅವಳ ಸಹೋದರ ಖರ ಮತ್ತು ದೂಷಣ ಹಾಗೂ ೧೦ಸಾವಿರ ಸೈನ್ಯದೊಂದಿಗೆ ಬಂದಾಗ ರಾಮನು ಲಕ್ಷ್ಮಣನಿಗೆ, ‘ನೀನು ಸೀತೆಯನ್ನು ನೋಡಿಕೋ! ಈ ಸೈನ್ಯವನ್ನು ಸೋಲಿಸಲು ನಾನೊಬ್ಬನೇ ಸಾಕು’ ಎಂದು ಹೇಳಿದನು. ಇದರಿಂದ ರಾಮನ ಶೌರ್ಯದ ಕಲ್ಪನೆ ಬರುತ್ತದೆ. ಇಲ್ಲಿ ರಾಮನ ಮನಸ್ಸಿನ ವೈಶಾಲ್ಯವು ತಿಳಿಯುತ್ತದೆ. ರಾಮನ ಮನಸ್ಸು ವಿಶ್ವವ್ಯಾಪಕವಾಗಿತ್ತು. ಅವನು ವಿರಾಟನ (ಈಶ್ವರನ) ಅಂಶವಾಗಿದ್ದನು. ಈಶ್ವರನ ಸಾಮರ್ಥ್ಯವು ಅವನಲ್ಲಿ ಬಂದಿತ್ತು. ಪೃಥ್ವಿ ಮತ್ತು ಪೃಥ್ವಿಯ ಮೇಲಿನ ಸೈನ್ಯವು ಅವನಿಗೆ ನಗಣ್ಯವಾಗಿತ್ತು.

ಪ್ರತಿಯೊಬ್ಬರೂ ಲಕ್ಷ್ಮಣರಾಗಬೇಕು!
ಲಕ್ಷ್ಮಣನು ವನವಾಸದಲ್ಲಿದ್ದಾಗ ರಾಮ ಮತ್ತು ಸೀತೆಯರ ಹಿಂದಿನಿಂದ ಹೋಗುತ್ತಿದ್ದನು. ಲಕ್ಷ್ಮಣನಿಗೆ ರಾಮನ ಬಗ್ಗೆ ಬಹಳ ಪ್ರೇಮವಿತ್ತು. ರಾಮನು ಯಾವಾಗಲೂ ತನ್ನ ಎದುರು ಇರಬೇಕೆಂದು ಅನಿಸುತ್ತಿತ್ತು. ಲಕ್ಷ್ಮಣನು ಯಾವಾಗಲೂ ರಾಮನಾಮವನ್ನು ಜಪಿಸುತ್ತಿದ್ದನು, ಅವನು ರಾಮನನ್ನು ಭಜಿಸುತ್ತಿದ್ದನು. ಇಂತಹ ಈ ಭಕ್ತನು ಮಾಯೆಯ, ಅಂದರೆ ಸೀತೆಯ ಮುಖವನ್ನು ಯಾವತ್ತೂ ನೋಡಲಿಲ್ಲ. ಅವನು ಅವಳ ಪದಕಮಲಗಳ ಕಡೆಗೆ ನೋಡಿ ನಡೆಯುತ್ತಿದ್ದನು. ಅದರಿಂದ ಲಕ್ಷ್ಮಣನ ಮೇಲಿನ ಮಾಯೆಯ ಹಿಡಿತವು ಕಡಿಮೆಯಾಯಿತು ಮತ್ತು ‘ಸೀತಾ-ರಾಮ-ಲಕ್ಷ್ಮಣ’ ಈ ಶಬ್ದವು ನಿರ್ಮಾಣವಾಯಿತು.

ರಾಮಭಕ್ತಿಯ ಸಾಮರ್ಥ್ಯ
ಒಮ್ಮೆ ಅಂಗದನು ರಾಮನ ದೂತನಾಗಿ ರಾವಣನ ರಾಜ್ಯಸಭೆಗೆ ಹೋದನು, ಆಗ ರಾವಣನು ತನ್ನ ಪ್ರಶಂಸೆಯನ್ನು ಮಾಡಿಕೊಂಡು ಅವನನ್ನು ಹೆದರಿಸಿದನು. ಆಗ ಅಂಗದನು ‘ಎಲೈ ರಾವಣನೇ, ಇಲ್ಲಿಯವರೆಗೆ ನಾನು ನಿನ್ನ ಶೌರ್ಯದ ಬಗ್ಗೆ ಕೇಳಿದೆ. ಈಗ ನಾನು ನನ್ನ ಕಾಲನ್ನು ಭೂಮಿಯ ಮೇಲೆ ಇಡುತ್ತೇನೆ, ನೀನು ಅಥವಾ ನಿನ್ನ ಸೈನಿಕರು ಅದನ್ನು ಎತ್ತಿ ತೋರಿಸಬೇಕು ಅಂದರೆ ನಾನು ನಿನ್ನ ಮಾತುಗಳನ್ನು ನಿಜವೆಂದು ನಂಬುತ್ತೇನೆ’ ಎಂದನು. ಅಂಗದನು ‘ಜೈ ಶ್ರೀರಾಮ’ ಎಂದು ತನ್ನ ಕಾಲನ್ನು ಭೂಮಿಯ ಮೇಲೆ ಇಟ್ಟನು. ಆಶ್ಚರ್ಯದ ಸಂಗತಿಯೆಂದರೆ ರಾವಣ ಅಥವಾ ಅವನ ಎಲ್ಲ ಸೈನಿಕರಿಂದ ಅಂಗದನ ಕಾಲನ್ನು ಅಲುಗಾಡಿಸಲೂ ಆಗಲಿಲ್ಲ. ಇದೇ ರಾಮಭಕ್ತಿಯ ಪರಿಣಾಮವಾಗಿದೆ!

(ಹಬ್ಬಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಓದಿ ಸನಾತನ ಸಂಸ್ಥೆಯ ಗ್ರಂಥ ‘ಹಬ್ಬ, ಧಾರ್ಮಿಕ ಉತ್ಸವ ಮತ್ತು ವ್ರತಗಳು)